Bengaluru

24ಗಂಟೆಯಲ್ಲಿ 48ಸಾವಿರ ಮಂದಿಗೆ ಕೊರೊನಾ ದೃಢ: 22ಮಂದಿ ಸಾವು

ಬೆಂಗಳೂರು: ಕರ್ನಾಟಕದಲ್ಲಿ ಕೊರೊನಾ ಸೋಂಕು ತೀವ್ರಗತಿಯಲ್ಲಿ ಏರಿಕೆಯಾಗುತ್ತಿದೆ. ದಿನೇ ದಿನೇ ಸಾವಿರಾರು ಸಂಖ್ಯೆಯಲ್ಲಿ ಜನ ಸೋಂಕಿಗೆ ತುತ್ತಾಗುತ್ತಿದ್ದಾರೆ. ಇಂದು ಒಂದೇ ದಿನ ಒಟ್ಟು 48,049 ಮಂದಿಗೆ  ಕೊರೊನಾ ಸೋಂಕು ದೃಢಪಟ್ಟಿದ. ಮಹಾಮಾರಿಗೆ  ರಾಜ್ಯದಲ್ಲಿ ಇಂದು  22 ಜನ ಪ್ರಾಣ ತೆತ್ತಿದ್ದಾರೆ.  ಸೋಂಕಿನಿಂದ 18,115 ಮಂದಿ ಗುಣಮುಖರಾಗಿದ್ದಾರೆ. ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 3,23,143ಕ್ಕೆ ಏರಿಕೆಯಾಗಿದೆ. ರಾಜ್ಯದ ಪಾಸಿಟಿವಿಟಿ ದರ ಶೇ 19.23ಕ್ಕೆ ಇಳಿದಿದೆ. ಸೋಂಕಿನಿಂದ ಸಾವನ್ನಪ್ಪುವವರ ಪ್ರಮಾಣ ಶೇ 0.04 ಇದೆ. ರಾಜ್ಯದಲ್ಲಿ ಇದುವರೆಗೆ ಒಟ್ಟು 34,25,002 ಮಂದಿಯಲ್ಲಿ ಸೋಂಕು ದೃಢಪಟ್ಟಿದ್ದು, 30,63,292 ಮಂದಿ ಚೇತರಿಸಿಕೊಂಡಿದ್ದಾರೆ. ವೈರಸ್‌ನಿಂದ ಒಟ್ಟು 38,537 ಜನರು ಸಾವನ್ನಪ್ಪಿದ್ದಾರೆ.

ಸಿಲಿಕಾನ್‌ ಸಿಟಿಯಲ್ಲಿ ಇಂದು ಒಂದೇ ದಿನ 29,068 ಜನರಲ್ಲಿ ಸೋಂಕು ಕಾಣಿಸಿಕೊಂಡಿದೆ, ನಗರದಲ್ಲಿ ಆರು ಮಂದಿ ಸಾವನ್ನಪ್ಪಿದ್ದಾರೆ. 7,116 ಮಂದಿ ಚೇತರಿಸಿಕೊಂಡಿದ್ದಾರೆ ಎಂದು ಆರೋಗ್ಯ ಸಚಿವ ಮಾಹಿತಿ ನೀಡಿದೆ.

 

Share Post