Bengaluru

ಸಂಪುಟದಲ್ಲಿ 4 ಸ್ಥಾನ ಖಾಲಿ ಇದೆ; ವರಿಷ್ಠರ ತೀರ್ಮಾನಕ್ಕೆ ಬಿಟ್ಟಿದ್ದು ಎಂದ ಸಿಎಂ

ಬೆಂಗಳೂರು: ರಾಜ್ಯ ಸಂಪುಟದಲ್ಲಿ ನಾಲ್ಕು ಸ್ಥಾನಗಳು ಖಾಲಿ ಇವೆ. ಅವುಗಳನ್ನು ಯಾವಾಗ ಭರ್ತಿ ಮಾಡಬೇಕು ಎಂಬುದನ್ನು ನಮ್ಮ ವರಿಷ್ಠರು ತೀರ್ಮಾನ ಮಾಡುತ್ತಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ಪಷ್ಟನೆ ಕೊಟ್ಟಿದ್ದಾರೆ.

ಕೆಲ ಶಾಸಕರು ಸಚಿವ ಸ್ಥಾನಕ್ಕಾಗಿ ಪಟ್ಟು ಹಿಡಿದಿರುವ ಬಗ್ಗೆ ಪ್ರತಿಕ್ರಿಯೆ ನೀಡಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು, ಸಚಿವ ಸಂಪುಟ ವಿಸ್ತರಣೆ ಮಾಡುವುದನ್ನು ನಮ್ಮ ಪಕ್ಷದ ವರಿಷ್ಠರು ತೀರ್ಮಾನಿಸುತ್ತಾರೆ. ಯಾವಾಗ ವಿಸ್ತರಣೆ ಮಾಡಬೇಕು ಎಂಬುದನ್ನು ಅವರೇ ಸೂಚಿಸುತ್ತಾರೆ. ವರಿಷ್ಠರು ಕರೆದರೆ, ನಾನು ಆ ಬಗ್ಗೆ ವಿವರಣೆ ನೀಡುತ್ತೇನೆ ಎಂದು ಹೇಳಿದ್ದಾರೆ.

ಇನ್ನು ನನ್ನ ಆರು ತಿಂಗಳ ಅಧಿಕಾರಾವಧಿಯಲ್ಲಿ ಮಾಡಿದ ಸಾಧನೆಗಳ ಬಗ್ಗೆ ಪುಸ್ತಕರ ಹೊರತರುತ್ತಿದ್ದೇವೆ. ಒಂದು ಕಾರ್ಯಕ್ರಮ ನಡೆಸಿ, ಪುಸ್ತಕರನ್ನು ಬಿಡುಗಡೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಬೊಮ್ಮಾಯಿ ಇದೇ ಸಂದರ್ಭದಲ್ಲಿ ತಿಳಿಸಿದರು.

Share Post