Bengaluru

ಇಂದು 46,426ಮಂದಿಗೆ ಕೊರೊನಾ ಸೋಂಕು ದೃಢ: 32 ಮಂದಿ ಸಾವು

ಬೆಂಗಳೂರು: ಕರ್ನಾಟಕದಲ್ಲಿ ಇಂದು ಒಂದೇ ದಿನ 46,426 ಮಂದಿಗೆ ಕೊರೊನಾ ಸೋಂಕು ತಗುಲಿದೆ. ಸೋಂಕಿಗೆ ಇಂದು ಒಟ್ಟು 32ಮಂದಿ ಸಾವನ್ನಪ್ಪಿದ್ದಾರೆ. ಸೋಂಕಿನಿಂದ 41,703 ಮಂದಿ ಗುಣಮುಖರಾಗಿದ್ದಾರೆ. ಸೋಂಕಿನ ಪಾಸಿಟಿವಿಟಿ ದರ 32.95% ರಷ್ಟಿದೆ. ರಾಜ್ಯದಲ್ಲಿ ಒಟ್ಟು ಸಕ್ರಿಯ ಪ್ರಕರಣಗಳು 3,62,487 ರಷ್ಟಿದೆ. ಇಲ್ಲಿವರೆಗೂ ಕೊರೊನಾದಿಂದ ಸಾವನ್ನಪ್ಪಿದವರ ಸಂಖ್ಯೆ 38,614ಕ್ಕೆ ತಲುಪಿರುವುದಾಗಿ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

ಬೆಂಗಳೂರು ನಗರದಲ್ಲಿಂದು ಒಟ್ಟು 21,569 ಮಂದಿಯಲ್ಲಿ ಸೋಂಕು ದೃಢಪಟ್ಟಿದ್ದು, 27,008 ಜನರು ಚೇತರಿಸಿಕೊಂಡಿದ್ದಾರೆ. ಒಂಭತ್ತು ಜನ ಸಾವನ್ನಪ್ಪಿದ್ದಾರೆ. ನಗರದಲ್ಲಿ ಈವರೆಗೆ 16,07,226 ಮಂದಿಗೆ ಸೋಂಕು ತಗುಲಿದ್ದು, 13,64,333 ಜನರು ಚೇತರಿಸಿಕೊಂಡಿದ್ದಾರೆ. ನಗರದಲ್ಲಿ ಪ್ರಸ್ತುತ 2,26,385 ಸಕ್ರಿಯ ಸೋಂಕು ಪ್ರಕರಣಗಳಿವೆ. ಕೊವಿಡ್​ನಿಂದ ಈವರೆಗೆ ಒಟ್ಟು 16,507 ಜನರು ಸಾವನ್ನಪ್ಪಿದ್ದಾರೆ.

Share Post