Sports

ವೆಸ್ಟ್‌ ಇಂಡೀಸ್‌ ಸರಣಿ – ಕುಲ್ದೀಪ್‌, ಬಿಷ್ಣೋಯ್‌ಗೆ ಸ್ಥಾನ

ನವದೆಹಲಿ : ವೆಸ್ಟ್‌ ಇಂಡೀಸ್‌ ಮತ್ತು ಭಾರತದ ನಡುವೆ ನಡೆಯಲಿರುವ ಸೀಮಿತ ಓವರ್‌ಗಳ ಸರಣಿಯಲ್ಲಿ ರವಿ ಬಿಷ್ಣೋಯ್‌ ಸ್ಥಾನ ಪಡೆದಿದ್ದಾರೆ. ಇನ್ನು ಕುಲ್ದೀಪ್‌ ಅವರು ತಂಡಕ್ಕೆ ಕಂಬ್ಯಾಕ್‌ ಮಾಡಲಿದ್ದಾರೆ.

ಬುಧವಾರ ಭಾರತ ಕ್ರಿಕೆಟ್‌ ನಿಯಂತ್ರಣ ಮಂಡಳಿ ವೆಸ್ಟ್‌ ಇಂಡಿಸ್‌ ವಿರುದ್ಧದ ಏಕದಿನ ಹಾಗೂ ಟಿ20 ಸರಣಿಗೆ ತಂಡವನ್ನು ಪ್ರಕಟಿಸಿದೆ. ರೋಹಿತ್‌ ಶರ್ಮ ತಂಡವನ್ನು ಮುನ್ನಡೆಸಲಿದ್ದಾರೆ.

ರುತುರಾಜ್‌ ಗಾಯಕ್ವಾಡ್‌, ವೆಂಕಟೇಶ್‌ ಐಯ್ಯರ್‌, ಆವೇಶ್‌ ಖಾನ್‌, ದೀಪಕ್‌ ಹೂಡಾ, ಹರ್ಷಲ್‌ ಪಟೇಲ್‌ ಕೂಡ ಸ್ಥಾನ ಪಡೆದಿದ್ದಾರೆ. ಮೊಣಕಾಲಿನ ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದ ಕುಲ್ದೀಪ್‌ ಅವರು ಕೂಡ ಸ್ಥಾನ ಗಿಟ್ಟಿಸಿದ್ದಾರೆ.

ಈ ಸರಣಿಯಿಂದ ಜಸ್ಪ್ರೀತ್‌ ಬುಮ್ರಾ ಮತ್ತು ಮೊಹಮ್ಮದ್‌ ಶಮಿ ಅವರಿಗೆ ವಿಶ್ರಾಂತಿ ನೀಡಲಾಗಿದೆ.

ಭಾರತ ಟಿ20 ತಂಡ: ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್ (ಉಪನಾಯಕ), ಇಶಾನ್ ಕಿಶನ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಸೂರ್ಯ ಕುಮಾರ್ ಯಾದವ್, ರಿಷಬ್ ಪಂತ್ (ವಿಕೆಟ್ ಕೀಪರ್), ವೆಂಕಟೇಶ್ ಅಯ್ಯರ್, ದೀಪಕ್ ಚಹಾರ್, ಶಾರ್ದೂಲ್ ಠಾಕೂರ್, ರವಿ ಬಿಷ್ಣೋಯ್, ಅಕ್ಷರ್ ಪಟೇಲ್, ಯುಜುವೇಂದ್ರ  ಚಹಾಲ್, ವಾಷಿಂಗ್ಟನ್ ಸುಂದರ್, ಮೊಹಮ್ಮದ್ ಸಿರಾಜ್, ಭುವನೇಶ್ವರ್ ಕುಮಾರ್, ಅವೇಶ್ ಖಾನ್, ಹರ್ಷಲ್ ಪಟೇಲ್

ಭಾರತ ಏಕದಿನ ತಂಡ: ರೋಹಿತ್ ಶರ್ಮಾ (ನಾಯಕ), ಕೆಎಲ್ ರಾಹುಲ್ (ಉಪನಾಯಕ), ರುತುರಾಜ್ ಗಾಯಕ್ವಾಡ್, ಶಿಖರ್ ಧವನ್, ವಿರಾಟ್ ಕೊಹ್ಲಿ, ಸೂರ್ಯ ಕುಮಾರ್ ಯಾದವ್, ಶ್ರೇಯಸ್ ಅಯ್ಯರ್, ದೀಪಕ್ ಹೂಡಾ, ರಿಷಭ್ ಪಂತ್ (ವಿಕೆಟ್ ಕೀಪರ್), ದೀಪಕ್ ಚಾಹರ್, ಶಾರ್ದೂಲ್ ಠಾಕೂರ್, ಯುಜುವೇಂದ್ರ ಚಾಹಲ್, ಕುಲ್ದೀಪ್ ಯಾದವ್ , ವಾಷಿಂಗ್ಟನ್ ಸುಂದರ್, ರವಿ ಬಿಷ್ಣೋಯ್, ಮೊಹಮ್ಮದ್ ಸಿರಾಜ್, ಪ್ರಸಿದ್ಧ್ ಕೃಷ್ಣ, ಅವೇಶ್ ಖಾನ್

Share Post