Cinema

ಬಹು ನಿರೀಕ್ಷಿತ ವಿಕ್ರಾಂತ್‌ ರೋಣ ರಿಲೀಸ್‌ ಮುಂದಕ್ಕೆ

ಬೆಂಗಳೂರು : ಕಿಚ್ಚ ಸುದೀಪ್‌ ಅವರ ಅಭಿನಯದ ಬಹು ನಿರೀಕ್ಷಿತ ಚಿತ್ರ ವಿಕ್ರಾಂತ್‌ ರೋಣ ಚಿತ್ರದ ರಿಲೀಸ್‌ ಡೇಟ್‌ ಮುಂದಕ್ಕೆ ಹೋಗಿದೆ. ಕೊರೊನಾ ಮೂರನೇ ಅಲೆಯ ಕಾರಣ ಚಿತ್ರತಂಡ ಸಿನಿಮಾವನ್ನು ಮುಂದೂಡಿದೆ. ಫೆಬ್ರುವರಿ 24ರಂದು ಬಿಡುಗಡೆ ಮಾಡುವುದಾಗಿ ಘೋಷಿಸಿದ್ದ ತಂಡ ಈಗ ಮನಸ್ಸು ಬದಲಿಸಿದೆ.

ರಂಗಿತರಂಗ ಖ್ಯಾತಿಯ ಅನೂಪ್ ಭಂಡಾರಿ ನಿರ್ದೇಶನದಲ್ಲಿ ತಯಾರಾಗುತ್ತಿರುವ ಈ ದೃಶ್ಯ ಕಾವ್ಯಕ್ಕೆ ಬಂಡವಾಳ ಹೂಡುತ್ತಿರುವವರು ಜಾಕ್‌ ಮಂಜು. ಸ್ವತಃ ಜಾಕ್‌ ಮಂಜು ಅವರೇ ಸಿನಿಮಾ ರಿಲೀಸ್‌ ಮುಂದೂಡುತ್ತಿದ್ದೇವೆ ಎಂದು ತಮ್ಮ ಇನ್ಸ್ಟಾಗ್ರಾಂನಲ್ಲಿ ಪೋಸ್ಟ್‌ ಒಂದನ್ನು ಹಾಕಿಕೊಂಡಿದ್ದಾರೆ.

ನಮ್ಮ ಕನಸು ಫೆಬ್ರವರಿ 24ರಂದು ನಿಮ್ಮ ಮುಂದೆ ತರಲು ನಾವು ಉತ್ಸುಕರಾಗಿದ್ದರೂ, ಪ್ರಸ್ತುತ ಕೋವಿಡ್ ಪರಿಸ್ಥಿತಿ ಹಾಗೂ ಅದಕ್ಕೆ ಸಂಬಂಧಿಸಿದ ನಿಯಮಾವಳಿಗಳು, ಪ್ರಪಂಚದಾದ್ಯಂತ ನಮ್ಮ ಸಿನಿಮಾವನ್ನು ತಲುಪಿಸಲು ಅನುಕೂಲಕರವಾಗಿಲ್ಲ. ನಿಮ್ಮ ಪ್ರೀತಿ ಹಾಗೂ ತಾಳ್ಮೆಗೆ ನಾವು ಆಭಾರಿ. ಅದಕ್ಕೆ ಪ್ರತಿಯಾಗಿ, ನೀವು ಮನಸಾರೆ ಸ್ವೀಕರಿಸುವಂತಹ ಚಿತ್ರ ನಿಮ್ಮ ಮುಂದೆ ತರುತ್ತೇವೆ ಎಂಬ ಭರವಸೆ ನಮಗಿದೆ. ಭಾರತದ ಮೊದಲ ಅಡ್ವೆಂಚರ್ ಹೀರೋನನ್ನು ಪ್ರಪಂಚಕ್ಕೆ ಪರಿಚಯಿಸುವ ಹೊಸ ದಿನಾಂಕವನ್ನು ಶೀಘ್ರದಲ್ಲೇ ನಿಮಗೆ ತಿಳಿಸುತ್ತೇವೆ ಎಂದು ಜಾಕ್‌ ಮಂಜು ತಮ್ಮ ಸೋಷಿಯಲ್‌ ಮೀಡಿಯಾದಲ್ಲಿ ತಿಳಿಸಿದ್ದಾರೆ.


 

Share Post