Bengaluru

ಶಿವರಾಮೇಗೌಡರನ್ನು ಪಕ್ಷದಿಂದ ಹೊರಹಾಕಿ; ಮಾಜಿ ಸಿಎಂ ಹೆಚ್ಡಿಕೆ ಸೂಚನೆ

ಬಿಡದಿ: ಶಿವರಾಮೇಗೌಡರು ಮಾದೇಗೌಡರ ಬಗ್ಗೆ ಅವಹೇಳನವಾಗಿ ಮಾತನಾಡಿರುವ ಆಡಿಯೋ ಬಗ್ಗೆ ಪ್ರತಿಕ್ರಿಯೆ ನೀಡಿರುವ ಮಾಜಿ ಸಿಎಂ ಹೆಚ್‌.ಡಿ.ಕುಮಾರಸ್ವಾಮಿಯವರು, ಶಿವರಾಮೇಗೌಡರನ್ನು ಪಕ್ಷದಿಂದ ಹೊರ ಹಾಕುವಂತೆ ಸೂಚನೆ ನೀಡಿದ್ದಾರೆ.

ಈ ಬಗ್ಗೆ ಬಿಡದಿಯಲ್ಲಿ ಮಾತನಾಡಿರುವ ಅವರು, ಶಿವರಾಮೇಗೌಡರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.  ಶಿವರಾಮೇಗೌಡರನ್ನು ಪಕ್ಷದಿಂದ ಹೊರಹಾಕಲು ನಮ್ಮ ಪಕ್ಷದ ರಾಜ್ಯಾಧ್ಯಕ್ಷರಿಗೆ ಸೂಚನೆ ನೀಡಿದ್ದೇನೆ. ಕೂಡಲೇ ಪಕ್ಷ ಅವರಿಗೆ ನೋಟಿಸ್‌ ನೀಡಲಿದೆ. ನಂತರ ಅವರನ್ನು ಪಕ್ಷದಿಂದ ಹೊರಹಾಕಲಾಗುತ್ತದೆ ಎಂದು ಹೇಳಿದ್ದಾರೆ.

ನಾಗಮಂಗಲ ವಿಧಾನಸಭಾ ಕ್ಷೇತ್ರದಲ್ಲಿ ನನಗೇ ಟಿಕೆಟ್‌ ಸಿಗುತ್ತದೆ. ಬೆಂಬಲ ಸೂಚಿಸಿ ಎಂದು ಶಿವರಾಮೇಗೌಡರು ಎಲ್ಲರಿಗೂ ಕರೆ ಮಾಡುತ್ತಿದ್ದಾರೆ. ಈ ನಡುವೆ ಕಾರ್ಯಕರ್ತೆಯೊಬ್ಬರಿಗೆ ಕರೆ ಮಾಡಿದ್ದಾಗ ಶಿವರಾಮೇಗೌಡರು, ಮಾಜಿ ಸಂಸದ ಮಾದೇಗೌಡರ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿದ್ದರು. ಈ ಆಡಿಯೋ ಎಲ್ಲೆಡೆ ವೈರಲ್‌ ಆಗಿತ್ತು. ಇದ್ರಿಂದ ಪಕ್ಷಕ್ಕಾಗುವ ಡ್ಯಾಮೇಜ್‌ ಕಂಟ್ರೋಲ್‌ ಮಾಡಲು ಜೆಡಿಎಸ್‌ ಮುಂದಾಗಿದೆ.

 

Share Post