Districts

ಸಿದ್ದರಾಮಯ್ಯ ಅವರು ಸಿದ್ದ ರಹೀಮಯ್ಯ ಆಗಲಿ; ಸಂಸದ ಪ್ರತಾಪ ಸಿಂಹ

ಮೈಸೂರು: ಸಿದ್ದರಾಮಯ್ಯ ಅವರು ಸಿದ್ದ ರಹೀಮಯ್ಯ ಎಂದು ತಮ್ಮ ಹೆಸರನ್ನು ಬದಲಿಸಿಕೊಳ್ಳಲಿ ಎಂದು ಮೈಸೂರು-ಕೊಡಗು ಸಂಸದ ಪ್ರತಾಪ ಸಿಂಹ ಲೇವಡಿ ಮಾಡಿದ್ದಾರೆ. 

ಮೈಸೂರಿನಲ್ಲಿ ಮಾತನಾಡಿದ ಅವರು, ಹಿಜಾಬ್‌ ವಿವಾದಕ್ಕೆ ಸಂಬಂಧಿಸಿದಂತೆ ಮಾತನಾಡಿರುವ ಸಿದ್ದರಾಮಯ್ಯ ವಿವಾದಕ್ಕೆ ಬಿಜೆಪಿ ಬಣ್ಣ ಹಚ್ಚುತ್ತಿದೆ ಎಂದು ಆರೋಪಿಸಿದ್ದಾರೆ. ಆದ್ರೆ ಇಲ್ಲಿ ರಾಜಕೀಯ ಮಾಡುತ್ತಿರುವುದು ಬಿಜೆಪಿಯಲ್ಲ. ಕಾಂಗ್ರೆಸ್‌ ಪಕ್ಷ ಎಂದು ಪ್ರತಾಪ ಸಿಂಹ ಆರೋಪಿಸಿದರು.

ಜಮೀರ್‌ ಅಹ್ಮದ್‌ ಅವರು ಚಾಮರಾಜಪೇಟೆಯಲ್ಲಿ ಸ್ಪರ್ಧಿಸುವಂತೆ ಸಿದ್ದರಾಮಯ್ಯ ಅವರಿಗೆ ಆಹ್ವಾನ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿಯೇ ಸಿದ್ದರಾಮಯ್ಯ ಅವರು, ಅಧಿಕಾರಕ್ಕಾಗಿ ಈ ರೀತಿಯ ಹೇಳಿಕೆ ನೀಡುತ್ತಿದ್ದಾರೆ. ಸಿದ್ದರಾಮಯ್ಯ ಅವರು ತಮ್ಮ ಹೆಸರನ್ನು ಸಿದ್ದ ರಹೀಮಯ್ಯ ಎಂದು ಬದಲಿಸಿಕೊಳ್ಳಲಿ ಎಂದ ಪ್ರತಾಪ ಸಿಂಹ ಲೇವಡಿ ಮಾಡಿದರು.

 

 

 

 

 

Share Post