Districts

ಹಿಜಾಬ್‌ ಆಯ್ತು, ಕೇಸರಿ ಆಯ್ತು ಇದೀಗ ನೀಲಿ ಶಾಲು ಎಂಟ್ರಿ

ಚಿಕ್ಕಮಗಳೂರು: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ ಹಿಜಾಬ್‌ ಮತ್ತು ಕೇಸರಿ ಶಾಲು ವಿವಾದ. ಸರ್ಕಾರದ ಆದೇಶಕ್ಕೆ ಕಿಮ್ಮತ್ತು ನೀಡದೆ ಇಂದು ಕೂಡ ಹಿಜಾಬ್‌ ಧರಿಸಿ ವಿದ್ಯಾರ್ಥಿನಿಯರು ಕಾಲೇಜಿಗೆ ಆಗಮಿಸಿದ್ದಾರೆ.

ಈ ನಡುವೆ ಚಿಕ್ಕಮಗಳೂರು ಐಡಿಎಸ್‌ಜಿ ಕಾಲೇಜಿನಲ್ಲಿ ಹಿಜಾಬ್‌ ಬೆಂಬಲಿಸಿ ಹಲವು ವಿದ್ಯಾರ್ಥಿಗಳು ನೀಲಿ ಶಾಲು ಧರಿಸಿ ಬಂದಿದ್ದಾರೆ. ಹಿಜಾಬ್‌ ತೆಗಸಬಾರದೆಂದು ವಿದ್ಯಾರ್ಥಿಗಳು ಧರಣಿ ನಡೆಸಿದ್ದಾರೆ. ನೀಲಿ ಶಾಲು ಧರಿಸಿರುವ ವಿದ್ಯಾರ್ಥಿಗಳು ಹಿಜಾಬ್‌ ಪರವಾಗಿ ಪ್ರತಿಭಟನೆ ನಡೆಸುತ್ತಿದ್ದಾರೆ. ಇವರ ವಿರುದ್ಧವಾಗಿ ಕೇಸರಿ ಶಾಲು ಧರಿಸಿದ ವಿದ್ಯಾರ್ಥಿಗಳು ಕೂಡ ಜೈ ಶ್ರೀರಾಮ್‌ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಜೈ ಭೀಮ್‌ ಎಂದು ಘೋಷಣೆ ಕೂಗುತ್ತಾ ವಿದ್ಯಾರ್ಥಿಗಳ ಗುಂಪೊಂದು ಧರಣಿ ನಡೆಸಿದೆ. ಈ ವಿವಾದ ತಾರಕಕ್ಕೇರುವ ಮುನ್ನವೇ ಸರ್ಕಾರ ಇತಿಶ್ರೀ ಹಾಡಬೇಕಿದೆ.

Share Post