National

ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ಗೆ ಕೊಲೆ ಬೆದರಿಕೆ

ಲಖನೌ: ಉತ್ತರ ಪ್ರದೇಶದಲ್ಲಿ ವಿಧಾನಸಭಾ ಚುನಾವಣಾ ಕಣ ರಂಗೇರುತ್ತಿದೆ. ಎಲ್ಲೆಲ್ಲೂ ಪ್ರಚಾರದ ಭರಾಟೆ ಜೋರಾಗಿ ನಡೆಯುತ್ತಿದೆ. ಈ ನಡುವೆ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಅವರಿಗೆ ಕೊಲೆ ಬೆದರಿಕೆ ಬಂದಿದೆ. ಟ್ವಿಟರ್‌ನಲ್ಲಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಅವರನ್ನು ಕೊಲೆ ಮಾಡಲಾಗುವುದು ಎಂದು ಪೋಸ್ಟ್‌ ಹಾಕಲಾಗಿದೆ.

ಈ ಬಗ್ಗೆ ಉತ್ತರ ಪ್ರದೇಶದ ಹಾಪುರ್‌ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಅಂದಹಾಗೆ ಲೇಡಿ ಡಾನ್‌ ಹೆಸರಿನ ಟ್ವಿಟರ್‌ ಖಾತೆಯಿಂದ ಪೋಸ್ಟ್‌ ಹಾಕಲಾಗಿದೆ. ಇದ್ರಲ್ಲಿ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್‌ ಹಾಗೂ ಹಲವು ನಾಯಕರ ಹೆಸರನ್ನು ಹೆಸರಿಸಲಾಗಿದೆ. ಇವರೆಲ್ಲರನ್ನೂ ಕೊಲೆ ಮಾಡುವುದಾಗಿ ಹೇಳಲಾಗಿದೆ.

ಆದರೆ ಈ ಲೇಡಿ ಡಾನ್‌ ಎಂಬ ಟ್ವಿಟರ್‌ ಖಾತೆ ಯಾರದು ಎಂಬುದು ಇನ್ನೂ ಗೊತ್ತಾಗಿಲ್ಲ. ಈ ಬಗ್ಗೆ ಸೈಬರ್‌ ಕ್ರೈಂ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಶೀಘ್ರದಲ್ಲೇ ಪೋಸ್ಟ್‌ ಹಾಕಿದ ಆರೋಪಿ ಹಾಗೂ ಆದರ ಹಿಂದೆ ಇರುವವರನ್ನು ಬಂದಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

Share Post