CrimeDistricts

ಕಾಳಿ ನದಿಯಲ್ಲಿ ಮೊಸಳೆಗೆ ಆಹಾರವಾದ ಯುವಕ: ಭಯದ ವಾತಾವರಣ

ಕಾರವಾರ: ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿಯ ಕಾಳಿ ನದಿಯಲ್ಲಿ ಯುವಕನನ್ನು ಮೊಸಳೆ ಹೊತ್ತೊಯ್ದ ಘಟನೆ ಸೋಮವಾರ ರಾತ್ರಿ ನಡೆದಿದೆ.

ದಾಂಡೇಲಿಯ ಪಟೇಲ್ ನಗರದ ಆರ್ಷದ್ ಖಾನ್ (22) ಮೊಸಳೆ ದಾಳಿಗೆ ಬಲಿಯಾದ ಯುವಕನಾಗಿದ್ದು, ದಿನನಿತ್ಯದ ಕೆಲಸ ಮುಗಿಸಿ ಕೈ ಕಾಲು ತೊಳೆಯಲು ಕಾಳಿ ನದಿ ದಡಕ್ಕೆ ಹೋಗಿದ್ದ.ಈ ವೇಳೆ ನೀರಿಗೆ ಕೈ ಹಾಕುತ್ತಿದ್ದಂತೆ ಮೊಸಳೆ ಆತನನ್ನು ಎಳೆದುಕೊಂಡಿದೆ.

ಅರಣ್ಯಾಧಿಕಾರಿಗಳು ಮತ್ತು ಅಗ್ನಿಶಾಮಕ ದಳದವರು ನದಿಯಲ್ಲಿ ಯುವಕನ ದೇಹಕ್ಕಾಗಿ ಹುಡುಕಾಟ ನಡೆಸಿದ್ದಾರೆ. ಘಟನೆ ಸಂಬಂಧ ದಾಂಡೇಲಿ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನದಿ ಅಂಚಿನ ಗ್ರಾಮಸ್ಥರಲ್ಲಿ ಭಯದ ವಾತಾವರಣ ನಿರ್ಮಾಣವಾಗಿದೆ.

Share Post