Bengaluru

ಹಿಜಾಬ್‌ ಅರ್ಜಿ ವಿಚಾರಣೆ ನಾಳೆಗೆ -ಹೈಕೋರ್ಟ್‌ ತ್ರಿಸದಸ್ಯ ಪೀಠದಿಂದ ಮುಂದೂಡಿಕೆ

ಬೆಂಗಳೂರು:  ಹಿಜಾಬ್‌ ಅರ್ಜಿ ವಿಚಾರಣೆಯನ್ನು ಮುಂದೂಡಲಾಗಿದೆ. ನಾಳೆ ಮಧ್ಯಾಹ್ನ 2.30ಕ್ಕೆ ಅರ್ಜಿ ವಿಚಾರಣೆ ಮುಂದೂಡಲಾಗಿದೆ. ಹೈಕೋರ್ಟ್‌ ತ್ರಿಸದಸ್ಯ ಪೀಠದಿಂದ ಅರ್ಜಿ ವಿಚಾರಣೆಯನ್ನು ಮುಂದೂಡಲಾಗಿದೆ. ನಾಳೆ ಮಧ್ಯಾಹ್ನ ಮತ್ತೆ ಅರ್ಜಿ ವಿಚಾರಣೆಯನ್ನು ಹೈಕೋರ್ಟ್‌ ತ್ರಿಸದಸ್ಯ ಪೀಠ ಕೈಗೆತ್ತಿಕೊಳ್ಳಲಿದೆ.

ನ್ಯಾಯಾಲಯದಲ್ಲಿ ಇಂದಿನ ವಾದ/ಪ್ರತಿವಾದ

ವಕೀಲ ದೇವದತ್‌ ಕಾಮತ್‌: ಹೈಕೋರ್ಟ್‌ಗಳ ತೀರ್ಪುಗಳ ಉಲ್ಲೇಖ – ಮೆಡಿಕಲ್ ಪ್ರವೇಶ ಪರೀಕ್ಷೆಗೆ ವಿದ್ಯಾರ್ಥಿನಿ ತೆರಳುತ್ತಿದ್ದರು. ಹಿಜಾಬ್ ಧರಿಸಲು ಅನುಮತಿ ನೀಡಿರಲಿಲ್ಲ. ಆಗ ವಿದ್ಯಾರ್ಥಿನಿ ಹೈಕೋರ್ಟ್ ಮೆಟ್ಟಿಲೇರಿದ್ದಾಗ ತೀರ್ಪು ನೀಡಿದೆ. ಅತ್ಯಗತ್ಯವಾದ ಧಾರ್ಮಿಕ ಆಚರಣೆಗಳಿಗೂ ಮಾನದಂಡಗಳಿವೆ. ಷರಿಯಾ ಕಾನೂನಿನ ಬಗ್ಗೆಯೂ ತೀರ್ಪಿನಲ್ಲಿ ಉಲ್ಲೇಖಿಸಲಾಗಿದೆ. ತೀರ್ಪಿನಲ್ಲಿರುವ ಹದೀತ್, ಖುರಾನ್ ಬಗ್ಗೆ ಉಲ್ಲೇಖಿಸಲಾಗಿದೆ. ‌ ಪೇಜ್ ನಂಬರ್‌ 30ರಲ್ಲಿರುವ ಪ್ಯಾರಾ 20ರಲ್ಲಿ ಧಾರ್ಮಿಕ ಗ್ರಂಥ ಉಲ್ಲೇಖಿಸಲಾಗಿದೆ.

ಮುಖ್ಯ ನ್ಯಾಯಮೂರ್ತಿ: ಮೊದಲಿನಿಂದಲೂ ವಿದ್ಯಾರ್ಥಿನಿಯರು ಹಿಜಾಬ್‌ ಧರಿಸುತ್ತಿದ್ದರೇ..?

ವಕೀಲ ದೇವದತ್‌ ಕಾಮತ್‌: ಹೌದು, ಸಮವಸ್ತ್ರದ ಬಣ್ಣದ ಹಿಜಾಬ್‌ ಧರಿಸುತ್ತಿದ್ದರು. ಕೇಂದ್ರೀಯ ವಿದ್ಯಾಲಯಗಳಲ್ಲಿ ಈಗಲೂ ಹಿಜಾಬ್‌ಗೆ ಅವಕಾಶವಿದೆ. ಸಮವಸ್ತ್ರದ ಬಣ್ಣದ ಹಿಜಾಬ್‌ ಧರಿಸಲು ಅವಕಾಶವಿದೆ.

ವಕೀಲ ದೇವದತ್‌ ಕಾಮತ್‌: 2016 ರಲ್ಲಿ ಸಮವಸ್ತ್ರ ಸಂಬಂಧ ಹೈಕೋರ್ಟ್ ವಿಚಾರಣೆ ನಡೆಸುತ್ತಿತ್ತು. ಈ ವೇಳೆ ಸಿಬಿಎಸ್‌ಇ ಪರಿಷ್ಕೃತ ಆದೇಶವನ್ನು ಶಾಲೆಗಳಿಗೆ ನೀಡಿತ್ತು. ಹಿಜಾಬ್ ಧರಿಸಿ ಬರುವವರು ಅರ್ಧ ಗಂಟೆ ಮುಂಚೆ ಬರುವಂತೆ ಆದೇಶಿಸಿತ್ತು. ಹಿಜಾಬ್ ಪರಿಶೀಲನೆ ನಡೆಸಲು ನಮಗೆ ಆಕ್ಷೇಪ ಇಲ್ಲ.

ಮುಖ್ಯ ನ್ಯಾಯಮೂರ್ತಿ: ವಿವಾದಿತ ಶಾಲೆಯ ವಿದ್ಯಾರ್ಥಿನಿಯರು ಮೊದಲಿನಿಂದಲೂ ಹಿಜಾಬ್‌ ಧರಿಸುತ್ತಿದ್ದಲೇ..?

ವಕೀಲ ದೇವದತ್‌ ಕಾಮತ್‌: ಕಾಲೇಜಿಗೆ ದಾಖಲಾದಾಗಿನಿಂದಲೂ ಆ ವಿದ್ಯಾರ್ಥಿನಿಯರು ಹಿಜಾಬ್ ಧರಿಸುತ್ತಿದ್ದರು. ಸಮವಸ್ತ್ರದ ಬಣ್ಣ ಏನಿದೆಯೋ ಅದೇ ಬಣ್ಣದ ಹಿಜಾಬ್ ಧರಿಸುತ್ತಿದ್ದರು. ವಿದ್ಯಾರ್ಥಿನಿಯರು ಈ ಆಚರಣೆಯನ್ನು ತಪ್ಪದೇ ಪಾಲಿಸುತ್ತಿದ್ದಾರೆ. ಹಿಜಾಬ್ ಧರಿಸಬೇಕು, ಉದ್ದದ ನಿಲುವಂಗಿ ಧರಿಸಬೇಕೆಂದು ಅವರ ಧರ್ಮಗ್ರಂಥದಲ್ಲಿ ಕೂಡಾ ಇದೆ.

ವಕೀಲ ದೇವದತ್‌ ಕಾಮತ್‌: ಅಜ್ಮಲ್ ಖಾನ್ ಎಂಬುವರು ಮದ್ರಾಸ್ ಹೈಕೋರ್ಟ್ ಗೆ ಅರ್ಜಿಯೊಂದನ್ನು ಸಲ್ಲಿಸಿದ್ದರು.  ಮತದಾರರ ಪಟ್ಟಿಯಲ್ಲಿ ಮುಸ್ಲಿಂ ಮಹಿಳೆಯ ಫೋಟೋ ಪ್ರಶ್ನಿಸಲಾಗಿತ್ತು. ಹೈಕೋರ್ಟ್ ಪರದಾ ಇಸ್ಲಾಂ ಧರ್ಮದ ಅತ್ಯಗತ್ಯ ಆಚರಣೆಯಲ್ಲ. ಆದರೆ ಹಿಜಾಬ್ ಇಸ್ಲಾಂ ಧರ್ಮದ ಅತ್ಯಗತ್ಯ ಆಚರಣೆ ತೀರ್ಪು ನೀಡಿತ್ತು. ಈ ವೇಳೆ, ಮಲೇಷಿಯಾ ಕೋರ್ಟ್​ನ ತೀರ್ಪನ್ನು ಅರ್ಜಿದಾರರು ಉಲ್ಲೇಖಿಸಿದ್ದರು.

ನ್ಯಾ.ಕೃಷ್ಣ ದೀಕ್ಷಿತ್ ಪ್ರಶ್ನೆ: ಮಲೇಷಿಯಾ ಜಾತ್ಯಾತೀತ ದೇಶವೇ..?

ವಕೀಲ ದೇವದತ್‌ ಕಾಮತ್‌:  ಇಲ್ಲ, ಮಲೇಷಿಯಾ ಇಸ್ಲಾಮಿಕ್ ದೇಶ. ಆದರೆ ನಮ್ಮ ದೇಶದಲ್ಲಿ ಹಿಜಾಬ್ ಪರವಾಗಿ ಹಲವಾರು ತೀರ್ಪುಗಳು ಬಂದಿವೆ.  ಹಿಜಾಬ್ ಇಸ್ಲಾಂನ ಅತ್ಯಗತ್ಯ ಆಚರಣೆ ಎಂದು ಕೇರಳ ಹೈಕೋರ್ಟ್ ತೀರ್ಪು ನೀಡಿದೆ. ನ್ಯಾ. ಮುಹಮ್ಮದ್ ಮುಷ್ತಾಕ್ ಈ ತೀರ್ಪು ನೀಡಿದ್ದರು. ಸಂವಿಧಾನದ 30 ನೇ ವಿಧಿಯಡಿ ಹೆಚ್ಚಿನ ಹಕ್ಕಿದೆ. ಖಾಸಗಿ ಅಲ್ಪಸಂಖ್ಯಾತ ಶಿಕ್ಷಣ ಸಂಸ್ಥೆಗೆ ಸಂವಿಧಾನದತ್ತ ಹಕ್ಕಿದೆ. ಆದರೆ ಇದು ಎಲ್ಲಾ ಶಿಕ್ಷಣ ಸಂಸ್ಥೆಗಳಿಗೂ ಅನ್ವಯವಾಗಲ್ಲ. ಹಿಜಾಬ್ ಧರಿಸಿ ಬರಬೇಕೇ ಬೇಡವೆ ಎಂದು ಶಿಕ್ಷಣ ಸಂಸ್ಥೆ ನಿರ್ಧರಿಸಬಹುದು. ಅಲ್ಪಸಂಖ್ಯಾತ ಶಿಕ್ಷಣ ಸಂಸ್ಥೆ ನಿರ್ಧರಿಸಬಹುದು ಎಂದು ಕೇರಳ ಹೈಕೋರ್ಟ್ ತೀರ್ಪು ನೀಡಿತ್ತು.

ನ್ಯಾ.ಕೃಷ್ಣ ದೀಕ್ಷಿತ್ ಪ್ರಶ್ನೆ: ಮಲೇಷಿಯಾ ಕೋರ್ಟ್ ತೀರ್ಪಿಗೆ ವ್ಯತಿರಿಕ್ತ ತೀರ್ಪುಗಳಿವೆಯೇ..?

ವಕೀಲ ದೇವದತ್‌ ಕಾಮತ್‌: ನನಗೆ ಗೊತ್ತಿರುವಂತೆ ಅಂತಹ ತೀರ್ಪುಗಳಿಲ್ಲ.

Share Post