Bengaluru

HIJAB ISSUE; ಬಳೆ, ಕುಂಕುಮ ಇಡಬಾರದಂತೆ; ಕಾಂಗ್ರೆಸ್‌ ವಿರುದ್ಧ ಹರಿಹಾಯ್ದ ಬಿಜೆಪಿ

ಬೆಂಗಳೂರು (Bangalore): ಹಿಜಾಬ್‌ ವಿವಾದಕ್ಕೆ (HIJAB ISSUE) ಸಂಬಂಧಿಸಿದಂತೆ ಕಾಂಗ್ರೆಸ್‌ ವಿರುದ್ಧ ಬಿಜೆಪಿ ಹರಿಹಾಯ್ದಿದೆ. ಈ ರಾಜ್ಯ ಬಿಜೆಪಿ ಅಧಿಕೃತ ಟ್ವಿಟರ್‌ ಖಾತೆಯಲ್ಲಿ ಪೋಸ್ಟ್‌ ಒಂದನ್ನು ಹಾಕಲಾಗಿದೆ. ಹಿಜಾಬ್‌ ವಿವಾದದ ಬಗ್ಗೆ ಕೋರ್ಟ್‌ನಲ್ಲಿ ವಿಚಾರಣೆ ನಡೆಯುತ್ತಿದೆ. ಇದಕ್ಕೆ ಕೆಪಿಸಿಸಿ ಕಚೇರಿಯಿಂದ ಸೂಚಿತ ವ್ಯಕ್ತಿಗಳೇ ನ್ಯಾಯಾಲಯದಲ್ಲಿ ವಾದ ಮಂಡಿಸುತ್ತಿದ್ದಾರೆ ಎಂದು ಬಿಜೆಪಿ ಆಕ್ರೋಶ ವ್ಯಕ್ತಪಡಿಸಿದೆ. #ಹಿಂದೂವಿರೋಧಿಕಾಂಗ್ರೆಸ್‌ ಎಂಬ ಹ್ಯಾಶ್‌ಟ್ಯಾಗ್‌ ಬಳಸಿ ಮಾಡಲಾದ ಟ್ವೀಟ್‌ ಈ ಕೆಳಕಂಡಂತಿದೆ.

ʻಹಿಜಾಬ್ ಪರವಾಗಿ ಕೆಪಿಸಿಸಿ ಕಚೇರಿಯಿಂದಲೇ ಸೂಚಿತವಾಗಿರುವ ವ್ಯಕ್ತಿಗಳು ನ್ಯಾಯಾಲಯದಲ್ಲಿ ವಾದ ಮಂಡಿಸುತ್ತಿದ್ದಾರೆ. ಹಿಜಾಬ್‌ ಧರಿಸಲು ಅವಕಾಶ ಇಲ್ಲವಾದರೆ, ಹಿಂದೂ ಧರ್ಮೀಯರು ಕೂಡಾ ಬಳೆ, ಹೂವು, ಕುಂಕುಮ ಇಡಬಾರದಂತೆ!!! ಹಿಂದೂ ಧರ್ಮ ಈ ನೆಲದ ಸಂಸ್ಕೃತಿ, ಅದನ್ನೇ ಇಂದು ಕಾಂಗ್ರೆಸ್‌ ವಿರೋಧಿಸುತ್ತಿದೆ. #ಹಿಂದೂವಿರೋಧಿಕಾಂಗ್ರೆಸ್‌ʼ

Share Post