Bengaluru

ಶಿವಮೊಗ್ಗದಲ್ಲಿ ಹರ್ಷನ ಕೊಲೆ ಮಾಡಿಸಿದ್ದು ಈಶ್ವರಪ್ಪನೇ-ಬಿ.ಕೆ.ಹರಿಪ್ರಸಾದ್‌ ಗಂಭೀರ ಆರೋಪ

ಬೆಂಗಳೂರು: ವಿಧಾನಪರಿಷತ್‌ ಕಲಾಪದಲ್ಲೂ ಈಶ್ವರಪ್ಪ ವಿರುದ್ಧ ಘೋಷಣೆ ಕೇಳಿಬಂದಿದೆ. ಸಚಿವ ಈಶ್ವರಪ್ಪ ಅವರನ್ನು ಸಚಿವ ಸ್ಥಾನದಿಂದ ವಜಾ ಮಾಡಬೇಕೆಂದು ಸದನದ ಬಾವಿಗಿಳಿದು ಕಾಂಗ್ರೆಸ್‌ ನಾಯಕರು ಧರಣಿ ನಡೆಸಿದ್ರು. ಈ ವೇಳೆ ಮಾತನಾಡಿದ ವಿದಾನ ಪರಿಷತ್‌ ವಿಪಕ್ಷ ನಾಯಕ ಬಿ.ಕೆ.ಹರಿಪ್ರಸಾದ್‌ ಶಿವಮೊಗ್ಗದಲ್ಲಿ ಹರ್ಷ ಎಂಬ ಕಭಜರಂಗದಳದ ಕಾರ್ಯಕರ್ತನ ಕೊಲೆ ಮಾಡಿಸಿರುವುದು ಈಶ್ವರಪ್ಪನವರೇ ಎಎಂದು ಗಂಭೀರ ಆರೋಪ ಮಾಡಿದ್ದಾರೆ.
ಕಳೆದ ವರ್ಷ ಈ ಹರ್ಷ ಎಂಬ ವ್ಯಕ್ತಿಯ ತಾಯಿ ಶಿವಮೊಗ್ಗದ ಎಸ್ಪಿ ಅವರ ಬಳಿ ನನ್ನ ಮಗ ಭಜರಂಗದಳದ ಕಾರ್ಯಕರ್ತ ಅಲ್ಲ ಎಂದು ಮುಚ್ಚಳಿಕೆ ಪತ್ರವನ್ನು ಬರೆದುಕೊಟ್ಟಿದ್ರು. ಈಗ ನೋಡಿದ್ರೆ ಆತ ಭಜರಂಗದಳದ ಕಾರ್ಯಕರ್ತ ಎನ್ನಲಾಗುತ್ತಿದೆ. ಇದರಲ್ಲಿ ಬಿಜೆಪಿಯವರದ್ದೇ ಸಂಚಿದೆ. ಕೂಡಲೇ ಈಶ್ವರಪ್ಪ ರಾಜೀನಾಮೆ ನೀಡಬೇಕು ಎಂದು ಬಿ.ಕೆ.ಹರಿಪ್ರಸಾದ್‌ ಅವರು ಆಕ್ರೋಶ ವ್ಯಕ್ತಪಡಿಸಿದ್ರು.
ಬಿ.ಕೆ.ಹರಿಪ್ರಸಾದ್‌ ಅವರ ಈ ಆರೋಪಕ್ಕೆ ಬಿಜೆಪಿ ಎಂಎಲ್‌ಸಿಗಳು ಕಿಡಿ ಕಾರಿದ್ರು. ಕಾಂಗ್ರೆಸ್‌ನವರಿಗೆ ಮಾಡಲು ಬೇರೆ ಕೆಲಸ ಇಲ್ಲ. ನಿನ್ನೆಯಿಂದ ನಾವು ಶಿವಮೊಗ್ಗದಲ್ಲೇ ಇದ್ದೇವೆ ಅದು ನಮ್ಮ ಜಿಲ್ಲೆ ಅಲ್ಲಿ ಏನಾಗುತ್ತದೆ ಎಂದು ನಮಗೆ ಗೊತ್ತಿರುತ್ತದೆ ಎಂದು ಬಿಜೆಪಿ ನಾಯಕರು ಆಕ್ರೋಶ ವ್ಯಕ್ತಪಡಿಸಿದ್ರು.

Share Post