Districts

HARSHA MURDER CASE: ಬೀರೂರಿನಲ್ಲಿ ಒಬ್ಬ ಆರೋಪಿ ಅರೆಸ್ಟ್‌

ಚಿಕ್ಕಮಗಳೂರು: ಶಿವಮೊಗ್ಗದ ಹಿಂದೂ ಪರ ಸಂಘಟನೆ ಕಾರ್ಯಕರ್ತ ಹರ್ಷ ಕೊಲೆ ಪ್ರಕರಣ ಸಂಬಂಧ ಓರ್ವ ಆರೋಪಿಯನ್ನು ಇಲ್ಲಿನ ಬೀರೂರು ಬಳ್ಳಾರಿ ಕ್ಯಾಂಪ್‌ನಲ್ಲಿ ಬಂಧಿಸಲಾಗಿದೆ. ಇನ್ನುಳಿದ ಆರೋಪಿಗಳಿಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.

ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲ್ಲೂಕಿನ ಬೀರೂರು ಬಳಿಯ ಬಳ್ಳಾರಿ ಕ್ಯಾಂಪ್‌ಗಳನ್ನು ಓರ್ವ ಆರೋಪಿಯನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದು ವಿಚಾರಣೆ ನಡೆಸುತ್ತಿದ್ದಾರೆ. ಹರ್ಷ ಕೊಲೆಯಲ್ಲಿ ನಾಲ್ಕೈದು ಆರೋಪಿಗಳು ಪಾಲ್ಗೊಂಡಿದ್ದು, ಉಳಿದ ಆರೋಪಿಗಳಾಗಿ ಪೊಲೀಸರು ಶೋಧ ನಡೆಸುತ್ತಿದ್ದಾರೆ.

ಪೊಲೀಸರಿಗೆ ಆರೋಪಿಗಳ ಮಾಹಿತಿ ಸಿಕ್ಕಿದೆ ಎಂದು ತಿಳಿದು ಬಂದಿದೆ. ಅದರ ಆಧಾರದ ಮೇಲೆ ಆರೋಪಿಗಳಿಗಾಗಿ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ.

 

Share Post