Districts

HDK REACTION: ಎರಡೂ ರಾಷ್ಟ್ರೀಯ ಪಕ್ಷಗಳಿಗೆ ಕೊರೊನಾ ಬಂದಿದೆ; ಮಾಜಿ ಸಿಎಂ ಹೆಚ್‌ಡಿಕೆ ಆಕ್ರೋಶ

ಮೈಸೂರು (MYSORE): ಬಿಜೆಪಿ-ಕಾಂಗ್ರೆಸ್‌ (BJP AND CONGRESS) ಒಂದೇ ನಾಣ್ಯದ ಎರಡು ಮುಖಗಳು. ಈ ಎರಡೂ ರಾಷ್ಟ್ರೀಯ ಪಕ್ಷಗಳಿಗೆ ಕೊರೊನಾ ಬಂದಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್‌.ಡಿ.ಕುಮಾರಸ್ವಾಮಿ (H.D.KUMARASWAMY) ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮೈಸೂರಿನಲ್ಲಿ ಮಾತನಾಡಿದ ಅವರು, ನಮ್ಮ ಪಕ್ಷದ ನಾಯಕರನ್ನು ಯಾರನ್ನಾದರೂ ಸೆಳೆಯಲಿ ಆದ್ರೆ, ಜೆಡಿಎಸ್‌ ಪಕ್ಷವನ್ನು ಏನೂ ಮಾಡೋದಕ್ಕೆ ಆಗೋದಿಲ್ಲ ಎಂದು ಹೇಳಿದರು.

ಎರಡನೇ ಹಂತದ ಮೇಕೆದಾಟು ಪಾದಯಾತ್ರೆ ಯಾಕೆ ಬೇಕು ಎಂದು ಪ್ರಶ್ನೆ ಮಾಡಿದ ಕುಮಾರಸ್ವಾಮಿ, ನೀವೇ ಮಣ್ಣಿನ ಮಕ್ಕಳು ಎಂದು ಬೋರ್ಡ್‌ ಹಾಕಿಕೊಂಡು ಹೋಗಿ. ಆದ್ರೆ ಜನ ನಿಮ್ಮನ್ನು ಕಲ್ಲಿನ ಮಕ್ಕಳು ಎಂದು ಕರೆಯುತ್ತಾರೆ ಎಂದು ಡಿ.ಕೆ. ಸಹೋದರರನ್ನು (DK BROTHERS) ಲೇವಡಿ ಮಾಡಿದರು. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ನಮ್ಮ ಪಕ್ಷದ ಯಾರನ್ನಾದರೂ ಸೆಳೆಯಲಿ, ತೊಂದರೆ ಇಲ್ಲ. ದೇವೇಗೌಡರು ಇರುವವರೆಗೂ ಯಾರೂ ಏನನ್ನೂ ಮಾಡಲಾಗುವುದಿಲ್ಲ ಎಂದು ಹೆಚ್‌.ಡಿ.ಕುಮಾರಸ್ವಾಮಿ ಇದೇ ವೇಳೆ ತಿಳಿಸಿದರು.

Share Post