Bengaluru

ವಿಧಾನಸಭೆ ಹಾಗೂ ಬಿಬಿಎಂಪಿ ಚುನಾವಣೆಗೆ ಜೆಡಿಎಸ್‌ ತಯಾರಿ; ಹೆಚ್‌ಡಿಕೆ

ಬೆಂಗಳೂರು: ಮುಂಬರುವ 2023ರ ವಿಧಾನಸಭಾ ಚುನಾವಣೆ ಹಾಗೂ ಬಿಬಿಎಂಪಿ‌ ಚುನಾವಣೆಗೆ ಜೆಡಿಎಸ್ ಎಲ್ಲ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಹೇಳಿದ್ದಾರೆ.

ಮುಂಬರುವ ಚುನಾವಣೆಗಳ ದೃಷ್ಟಿಯಿಂದ ಹೆಬ್ಬಾಳದಲ್ಲಿ ಕಚೇರಿ ಪ್ರಾರಂಭ ಮಾಡಲಾಗಿದೆ. ಈ ಭಾಗದಲ್ಲಿ ಪಕ್ಷ ಸಂಘಟನೆಗೆ ಅಗತ್ಯ ಕ್ರಮ ತೆಗೆದುಕೊಳ್ಳುತ್ತೇವೆ. ಈ‌ ಕ್ಷೇತ್ರದಲ್ಲಿ ಪಕ್ಷವು ಪ್ರಬಲವಾಗಿದ್ದು, ಈ ನಿಟ್ಟಿನಲ್ಲಿ ಕೆಲಸ‌ ಮಾಡುತ್ತಿದ್ದೇವೆ ಎಂದು ಅವರು ಹೇಳಿದರು.

ಬಿಬಿಎಂಪಿ ಹಾಗೂ ವಿಧಾನಸಭೆ ಚುನಾವಣೆ ಒಂದು ಕಡೆ ಇರಲಿ. ನಾವು-ನೀವು ಯೋಚನೆ ಮಾಡುವುದು ಯಾವ ವಿಚಾರ ಎನ್ನುವುದು ಮುಖ್ಯವಾಗುತ್ತದೆ. ನಿತ್ಯದ ಜೀವನಕ್ಕೆ ನೋವು ಯಾವ ರೀತಿ ಅನುಭವಿಸುತ್ತಿದ್ದೀರಾ? ನಿತ್ಯದ ನಿಮ್ಮ ಶ್ರಮಕ್ಕೆ ಯಾವ ಶಕ್ತಿಯನ್ನು ಸರ್ಕಾರ ತುಂಬುತ್ತಿದೆ? ನೀವು ಕಟ್ಟುವ ತೆರಿಗೆಗೆ ಸರ್ಕಾರ ನಡೆಸುವವರು ಶಕ್ತಿ ತುಂಬುತ್ತಿದ್ದಾರಾ ಅನ್ನುವುದು ಮುಖ್ಯ ಎಂದು ಕುಮಾರಸ್ವಾಮಿ ಹೇಳಿದರು.

Share Post