Bengaluru

ರಾಜ್ಯದಲ್ಲೂ ಕಾಂಗ್ರೆಸ್‌ ಧೂಳೀಪಟ ಮಾಡ್ತೀವಿ; ಮಾಜಿ ಸಿಎಂ ಯಡಿಯೂರಪ್ಪ

ನಿರೀಕ್ಷೆ ಮೀರಿ ಬಿಜೆಪಿ ಪರವಾಗಿ ಫಲಿತಾಂಶ ಬಂದಿದೆ. ಮೋದಿ ನೇತೃತ್ವಕ್ಕೆ ಜನ ಮನ್ನಣೆ ನೀಡಿದ್ದಾರೆ. ಈ ಮೂಲಕ ಕಾಂಗ್ರೆಸ್‌ ಪಕ್ಷವನ್ನು ಜನ ಮನ್ನಣೆ ನೀಡಿದ್ದಾರೆ ಎಂದು ಮಾಜಿ ಸಿಎಂ ಯಡಿಯೂರಪ್ಪ ಅವರು ಹೇಳಿದ್ದಾರೆ.

ವಿಧಾನಮಂಡಲದಲ್ಲಿ ಕೂಗಾಡುವುದರಿಂದ ಅಧಿಕಾರಕ್ಕೆ ಬರುವುದಿಲ್ಲ. ಇದರಿಂದ ಕಾಂಗ್ರೆಸ್‌ ಸ್ಥಿತಿ ಏನಾಗಿದೆ ಎಂಬುದು ಗೊತ್ತಾಗಲಿದೆ. ಈ ಗೆಲುವು ರಾಜ್ಯದ ಗೆಲುವಿಗೆ ದಿಕ್ಸೂಚಿಯಾಗಲಿದೆ. ರಾಜ್ಯದಲ್ಲಿ ನಮ್ಮ ಸರ್ಕಾರ ಒಳ್ಳೆಯ ಕೆಲಸ ಮಾಡುತ್ತಿದೆ. ಕಾಂಗ್ರೆಸ್‌ ಮೇಲೆ ಜನರಿಗೆ ವಿಶ್ವಾಸ ಹೋಗಿದೆ. ಹೀಗಾಗಿ ನಾವು ಈಗಾಗಲೇ ರಾಜ್ಯದಲ್ಲಿ ಸಂಘಟನೆ ಮಾಡಲು ಮುಂದಾಗಿದ್ದೇವೆ. ರಾಜ್ಯದಲ್ಲಿ ಮುಂದಿನ ಚುನಾವಣೆಯಲ್ಲಿ 130 ಸೀಟು ಗೆಲ್ಲುತ್ತೇವೆ ಎಂದು ಯಡಿಯೂರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಉತ್ತರ ಪ್ರದೇಶದಲ್ಲಿ ಯೋಗಿ ಆದಿತ್ಯನಾಥ್‌ ಅವರು ಕ್ರಿಮಿನಲ್‌ ಆಕ್ಟಿವಿಟಿ ಸೆದೆಬಡಿದಿದ್ದಾರೆ. ಉಳಿದ ರಾಜ್ಯಗಳಲ್ಲಿ ಮೋದಿ ಜನಪ್ರಿಯತೆ ಹಾಗೂ ಆಯಾ ರಾಜ್ಯಗಳಲ್ಲಿ ಬಿಜೆಪಿ ನಡೆಸಿದ ಅಭಿವೃದ್ಧಿ ನಮಗೆ ವರದಾನವಾಗಿದೆ ಎಂದು ಯಡಿಯೂರಪ್ಪ ಇದೇ ಸಂದರ್ಭದಲ್ಲಿ ತಿಳಿಸಿದ್ದಾರೆ.

Share Post