Bengaluru

ಐದು ರಾಜ್ಯಗಳ ಚುನಾವಣಾ ಫಲಿತಾಂಶ: ರಾಜ್ಯದ ಮೇಲೆ ಸಕಾರಾತ್ಮಕ ಪರಿಣಾಮ-ಸಿಎಂ ಬೊಮ್ಮಾಯಿ

ಬೆಂಗಳೂರು: ಕರ್ನಾಟಕದ ಮೇಲೆ ಐದು ರಾಜ್ಯ ಗಳ ಚುನಾವಣಾ ಫಲಿತಾಂಶ ಸಕಾರಾತ್ಮಕವಾದ ಪರಿಣಾಮ ಬೀರಲಿದೆ. ಕರ್ನಾಟಕದಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬರಲಿದೆ ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.  ಬಿಜೆಪಿ ಕಾರ್ಯಕರ್ತರಲ್ಲಿ ಉತ್ಸಾಹ ಮೂಡಿಸಿ, ಪಕ್ಷ ಇನ್ನಷ್ಟು ಶಕ್ತಿ ಶಾಲಿಯಾಗಿ ಮುನ್ನಡೆಯಲಿದೆ. ನಮ್ಮ ಸರ್ಕಾರ ಈಗಾಗಲೇ ಬಜೆಟ್ ನಲ್ಲಿ ಈಗಾಗಲೇ ನೀಡಿರುವ ಉತ್ತಮ ಕಾರ್ಯಕ್ರಮಗಳ ಅನುಷ್ಠಾನ ಮಾಡುವ ಮುಖಾಂತರ ಸುಭಿಕ್ಷ, ಸುಭದ್ರವಾದ, ನವ ಕರ್ನಾಟಕ ವನ್ನು ಒಂದು ವರ್ಷದಲ್ಲಿ ಪರಿಣಾಮಕಾರಿಯಾಗಿ ಸಾಧಿಸಿ ತೋರಿಸಿ ಜನರ ವಿಶ್ವಾಸವನ್ನು ಗಳಿಸಿ 2023 ರಲ್ಲಿ ಇಂದು ಫಲಿತಾಂಶ ಬಂದಂತೆಯೇ ಕರ್ನಾಟಕದ ಜನತೆ . ಬಿಜೆಪಿಯನ್ನು ಪುನರಾಯ್ಕೆ ಮಾಡಿ ಐದು ವರ್ಷ ಅಧಿಕಾರದಲ್ಲಿರಲಿದೆ ಎಂಬ ವಿಶ್ವಾಸ ವಿದೆ ಎಂದರು.

ನಾಲ್ಕು ರಾಜ್ಯ ಗಳಲ್ಲಿ ಭಾರತೀಯ ಜನತಾ ಪಕ್ಷ ಅಭೂತಪೂರ್ವ ಗೆಲುವು ಸಾಧಿಸಿ ಸರ್ಕಾರ ರಚನೆ ಮಾಡಲು ಜನರ ಆಶೀರ್ವಾದ ಪಡೆದುಕೊಂಡಿದೆ. ವಿಶೇಷವಾಗಿ ಉತ್ತರ ಪ್ರದೇಶದಲ್ಲಿ ಅತ್ಯಂತ ಹೆಚ್ಚು ಸ್ಥಾನಗಳನ್ನು ಗೆದ್ದು, ಮೋದಿ ಮತ್ತು ಯೋಗಿಯ ಡಬಲ್ ಇಂಜಿನ್ ಸರ್ಕಾರ ಉತ್ತರ ಪ್ರದೇಶವನ್ನು ಮುನ್ನಡೆಸುವ ಕೆಲಸ ಮಾಡುತ್ತಿದೆ.

ಏಪ್ರಿಲ್ ನಲ್ಲಿ ಪ್ರಧಾನಿ ಮೋದಿ ಕರ್ನಾಟಕಕ್ಕೆ
ಏಪ್ರಿಲ್ ನಲ್ಲಿ ನರೇಂದ್ರ ಮೋದಿಯವರು ಕರ್ನಾಟಕಕ್ಕೆ ಬರಲಿದ್ದಾರೆ. ಬರುವ ಸಂದರ್ಭದಲ್ಲಿ ಒಂದು ವರ್ಷದ ಎಲ್ಲಾ ಕಾರ್ಯಕ್ರಮಗಳನ್ನು ಜನರ ಮುಂದೆ ಅವರ ಮುಖಾಂತರ ಅನಾವರಣ ಮಾಡುವ ಕೆಲಸವನ್ನು ಮಾಡಲಿದ್ದೇವೆ ಎಂದು ಸಿಎಂ ತಿಳಿಸಿದ್ರು.

Share Post