Districts

ಸಮಾಜವನ್ನು ಹಾಳು ಮಾಡುವುದೇ ಬಿಜೆಪಿ ಅಜೆಂಡಾ: ಕುಮಾರಸ್ವಾಮಿ ಕಿಡಿ

ಮಂಡ್ಯ: ಪಠ್ಯಪುಸ್ತಕದಲ್ಲಿ ಭಗವದ್ಗೀತೆ ಬೋಧನೆ ವಿಚಾರವಾಗಿ ಹೆಚ್‌ಡಿಕೆ ಖಾರವಾಗಿ ಪ್ರತಿಕ್ರಿಯೆ ನೀಡಿದ್ದಾರೆ. ಸಮಾಜವನ್ನು ಹಾಳು ಮಾಡುವುದೇ ಬಿಜೆಪಿ ಅಜೆಂಡಾ ಎಂದು ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಕಿಡಿ ಕಾರಿದ್ದಾರೆ. ಭಗವದ್ಗೀತೆ ತಲೆ ತುಂಬುತ್ತೆಂದು ಪ್ರತಾಪ್‌ ಸಿಂಹ ಹೇಳಿಕೆ ನೀಡಡಿದ್ದಾರೆ. ನಾನು ರಾಮಾಯಣ, ಮಹಾಭಾರತ ಓದಿದ್ದೇನೆ ಅದರಿಂದ ನಾನು ಮಾನವೀಯ ಮೌಲ್ಯಗಳನ್ನು ಬೆಳೆಸಿಕೊಂಡಿದ್ದೇನೆ. ಆದರೆ ಬಿಜೆಪಿ ದ್ವೇಷ ಬಿತ್ತುವ ಕೆಲಸ ಮಾಡ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇಂತಹ ದ್ವೇಷ ಬಿತ್ತುವ ಗುಣಗಳನ್ನು ತಲೆಗೆ ತುಂಬಿಸಿಕೊಳ್ಳುವ ಅವಶ್ಯಕತೆ ಇಲ್ಲ. ಬಿಜೆಪಿಯವರಿಂದ ನಾನು ತಿಳಿದುಕೊಳ್ಳುವ ಅಗತ್ಯ ನನಗಿಲ್ಲ ಅಂತಹವರಿಂದ ಕಲಿತರೆ ಸಮಾಜ ಹಾಳಾಗುತ್ತದೆ ಎಂದು ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಹೆಚ್‌.ಡಿ.ಕುಮಾರಸ್ವಾಮಿ ಹೇಳಿದ್ರು.

Share Post