Bengaluru

ನಿಮ್ಮ ಭವಿಷ್ಯಕ್ಕೆ ನಾನು ಗ್ಯಾರೆಂಟಿ: ಇಲ್ಲಿಯೇ ನಿಮ್ಮ ಶಿಕ್ಷಣ ಮುಂದುವರೆಸಿ-ಆರೋಗ್ಯ ಸಚಿವ

ಬೆಂಗಳೂರು: ರಷ್ಯಾ-ಉಕ್ರೇನ್‌ ನಡುವಿನ ಯುದ್ಧದಲ್ಲಿ ದೇಶದ ವಿದ್ಯಾರ್ಥಿಗಳ ವಿದ್ಯಾಭ್ಯಾಸ ಅತಂತ್ರ ಸ್ಥಿತಿ ತಲುಪಿದೆ. ಯುದ್ಧ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳು ತಾಯ್ನಾಡಿಗೆ ಮರಳಿದ್ದಾರೆ. ವಿದ್ಯಾರ್ಥಿಗಳ ಭವಿಷ್ಯದ ಬಗ್ಗೆ ಈಗಾಗಲೇ ಕೇಂದ್ರ ಚಿಂತನೆ ನಡೆಸುತ್ತಿದೆ. ಇತ್ತ ರಾಜ್ಯದಲ್ಲೂ ವಿದ್ಯಾರ್ಥಿಗಳು ತಮ್ಮ ಓದಿನ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ.

ಈ ಹಿನ್ನೆಲೆಯಲ್ಲಿ ಇಂದು ವಿಧಾನಸೌಧದ ಸಮ್ಮೇಳನಾ ಸಭಾಂಗಣದಲ್ಲಿ ಉಕ್ರೇನ್‌ನಲ್ಲಿ ಓದುತ್ತಿರುವ ಮೆಡಿಕಲ್‌ ವಿದ್ಯಾರ್ಥಿಗಳೊಂದಿಗೆ ಆರೋಗ್ಯ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್‌ ಸಭೆ ನಡೆಸಿದ್ದಾರೆ. ಸಭೆಯಲ್ಲಿ ವಿದ್ಯಾರ್ಥಿಗಳ ಉಜ್ವಲ ಭವಿಷ್ಯದ ಬಗ್ಗೆ ಅಭಯ ನೀಡಿದ್ದಾರೆ. ನಿಮ್ಮ ಅಣ್ಣನಾಗಿ ಅಂದರೆ ಹಿರಿಯಣ್ಣನಾಗಿ ನಿಮ್ಮ ಉಜ್ವಲ ಭವಿಷ್ಯವನ್ನು ರೂಪಿಸುವೆ. ನೀವು ಇಲ್ಲಿಯೇ ನಿಮ್ಮ ಶಿಕ್ಷಣವನ್ನು ಮುಂದುವರೆಸಿ. ಅದಕ್ಕೆ ಬೇಕಾದ ಎಲ್ಲಾ ವ್ಯವಸ್ಥೆಗಳನ್ನು ಮಾಡುವುದಾಗಿ ಸುಧಾಕರ್‌ ಭರವಸೆ ನೀಡಿದ್ದಾರೆ.

Share Post