Districts

ಪರಿಷತ್‌ ಸದಸ್ಯ ಡಿ.ಎಸ್‌.ಅರುಣ್‌ಗೆ ಬೆದರಿಕೆ ಹಾಕಿದ್ದು ಯಾರು ಗೊತ್ತಾ..?

ಶಿವಮೊಗ್ಗ: ಹಿಂದೂ ಪರ ಸಂಘಟನೆ ಕಾರ್ಯಕರ್ತ ಹರ್ಷಾ ಕೊಲೆ ಪ್ರಕರಣದ ವೇಳೆ ಪರಿಷತ್‌ ಸದಸ್ಯ ಡಿ.ಎಸ್‌.ಅರುಣ್‌ಗೆ ಕೊಲೆ ಬೆದರಿಕೆ ಹಾಕಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಾಗಲಕೋಟೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ನಿಮ್ಮ ತಲೆಲಿ ಇವತ್ತು ಕೇವಲ ಒಬ್ಬ ಹಿಂದೂ ಕಾರ್ಯಕರ್ತ ಸತ್ತಿದ್ದಾನೆ ಅಷ್ಟೆ. ಆದ್ರೆ ಮುಂದಿನ ದಿನ ನಿಮ್ಮ ಹೆಂಡಿರು ಮಕ್ಕಳೇ ನಮ್ಮವರ ಟಾರ್ಗೆಟ್‌… ಎಂದು ಫೇಸ್‌ಬುಕ್‌ನಲ್ಲಿ ಬೆದರಿಕೆ ಹಾಕಲಾಗಿತ್ತು.

ಬೆಳಗಾವಿ ತಾಲ್ಲೂಕಿನ ಗೋಕಾಕದ ಶಿಂದಿಕುರಬೆಟ್‌ನ ಸಿದ್ಧಾರೂಢ ಶ್ರೀಕಾಂತ್ (31) ಬಂಧಿತ ಆರೋಪಿಯಾಗಿದ್ದಾನೆ. ಈತ ಫೇಸ್ ಬುಕ್‌ನಲ್ಲಿ ಮುಸ್ಲಿಂ ಯುವಕ ಮುಸ್ತಾಕ ಅಲಿ ಹೆಸರಿನಲ್ಲಿ ಪೋಸ್ಟ್‌ ಹಾಕಿದ್ದ. ಡಿ.ಎಸ್‌.ಅರುಣ್‌ ಕುಟುಂಬದವರ ಕೊಲೆ ಮಾಡುತ್ತೇನೆಂದು ಬೆದರಿಕೆ ಹಾಕಿದ್ದ. ಈ ಸಂಬಂಧ ಅರುಣ್‌ ಅವರು ಶಿವಮೊಗ್ಗ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. ಬಾಗಲಕೋಟೆ ಪೊಲೀಸರು ಬೇರೊಂದು ಪ್ರಕರಣದಲ್ಲಿ ಆರೋಪಿಯನ್ನು ಬಂಧಿಸಿದಾಗ ಮುಸ್ಲಿಂ ಯುವಕನ ಹೆಸರಲ್ಲಿ ಅರುಣ್‌ಗೆ ಬೆದರಿಕೆ ಹಾಕಿದ ವಿಷಯ ಬೆಳಕಿಗೆ ಬಂದಿದೆ.

Share Post