Districts

ಸಾಗರ ತಾಲ್ಲೂಕು ವೈದ್ಯಾಧಿಕಾರಿ ಕೆರೆಯಲ್ಲಿ ಶವವಾಗಿ ಪತ್ತೆ; ಸಾವಿನ ಬಗ್ಗೆ ಅನುಮಾನ

ಶಿವಮೊಗ್ಗ: ಶಿವಮೊಗ್ಗ ಸಾಗರ ತಾಲ್ಲೂಕು ಸಹಾಯಕ ವೈದ್ಯಾಧಿಕಾರಿಯಾಗಿ ಉತ್ತಮ ಹೆಸರು ಗಳಿಸಿದ್ದ ಡಾ.ಶರ್ಮಾ ಅವರು ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿದ್ದಾರೆ. ಸಾಗರ ಬಳಿಯ ಗಣಪತಿ ಕೆರೆಯಲ್ಲಿ ಅವರು ಶವವಾಗಿ ಪತ್ತೆಯಾಗಿದ್ದಾರೆ. ಇದು ಆತ್ಮಹತ್ಯೆಯೋ, ಕೊಲೆಯೋ ಎಂಬುದರ ಬಗ್ಗೆ ಅನುಮಾನಗಳು ಮೂಡಿವೆ. ಈ ಹಿನ್ನೆಲೆಯಲ್ಲಿ ಪೊಲೀಸರು ತನಿಖೆ ಶುರು ಮಾಡಿದ್ದಾರೆ. 

   ವೈದ್ಯೆ ಡಾ.ಶರ್ಮಾ ಅವರು ಸಹಾಯಕ ವೈದ್ಯಾಧಿಕಾರಿಯಾಗಿ ಹಾಗೂ ರಾಷ್ಟ್ರೀಯ ಲಸಿಕಾ ಸುರಕ್ಷತಾ ಅಭಿಯಾನದ ಅಧಿಕಾರಿಯಾಗಿ ಉತ್ತಮವಾಗಿ ಕಾರ್ಯನಿರ್ವಹಿಸಿದ್ದರು. ಕೊವಿಡ್‌ ಸಮಯದಲ್ಲಿ ಸಾಕಷ್ಟು ಶ್ರಮ ವಹಿಸಿ, ಕೊವಿಡ್‌ ತಡೆಗಟ್ಟಲು ಶ್ರಮಿಸಿದ್ದರು. ತಾಲ್ಲೂಕಿನಲ್ಲಿ ಲಸಿಕಾ ಅಭಿಯಾನ ಚುರುಕುಗೊಳ್ಳಲು ಕಾರಣರಾಗಿದ್ದರು. ಆದ್ರೆ, ಯಾಕೆ ಅವರು ಸಾವನ್ನಪ್ಪಿದರು ಎಂಬುದು ಮಾತ್ರ ಇನ್ನೂ ನಿಗೂಢವಾಗಿಯೇ ಇದೆ.

ಅಂದಹಾಗೆ, ಡಾ.ಶರ್ಮಾ ಅವರ ಪತಿ ಇದೇ ಸಾಗರ ತಾಲ್ಲೂಕಿನ ಭಿಮನಕೋಣೆ ಗ್ರಾಮ ಪಂಚಾಯತ್‌ನ ಪಿಡಿಒ ಆಗಿದ್ದಾರೆ. ದಂಪತಿಗೆ ಇಬ್ಬರು ಮಕ್ಕಳಿದ್ದಾರೆಂದು ತಿಳಿದುಬಂದಿದೆ.

 

Share Post