BengaluruCrime

ಬಿಬಿಎಂಪಿ ಕಸದ ಲಾರಿಗೆ ಮತ್ತೊಂದು ಬಲಿ: ದ್ವಿಚಕ್ರ ವಾಹನ ಸವಾರ ಸ್ಥಳದಲ್ಲೇ ಮೃತ

ಬೆಂಗಳೂರು: ಬಿಬಿಎಂಪಿ ಅನಾಹುತ ಒಂದೆರಡಲ್ಲ…ದಿನಬೆಳಗಾದ್ರೆ ಯಾವುದಾದರೊಂದು ಯಡವಟ್ಟು ಮಾಡಿ ಸದಾ ಸುದ್ದಿಯಲ್ಲಿರುತ್ತದೆ. ಹೆಬ್ಬಾಳದಲ್ಲಿ ಬಾಲಕಿ ಬಿಬಿಎಂಪಿ ಕಸದ ಲಾರಿಗೆ ಸಿಕ್ಕಿ ಸಾವನ್ನಪ್ಪಿದ  ಘಟನೆ ಮಾಸುವ ಮುನ್ನವೇ ಮತ್ತೊಂದು ದಾರುಣ ಘಟನೆ ಮನೆ ಮಾಡಿದೆ. ಬಿಬಿಎಂಪಿ ಕಸದ ಲಾರಿಗೆ ಸಿಕ್ಕಿ ಇಂದು ಮತ್ತೊಬ್ಬ ವ್ಯಕ್ತಿ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಬಾಗಲೂರು ಕ್ರಾಸ್‌ ಬಳಿಯ ರೇವಾ ಯೂನಿವರ್ಸಿಟಿ ಬಳಿ ನಡೆದಿದೆ.

ದ್ವಿಚಕ್ರ ವಾಹನದ ಮೇಲೆ ತೆರಳುತ್ತಿದ್ದ ರಾಮಯ್ಯ ಎಂಬುವವರ ಮೇಲೆ ಬಿಬಿಎಂಪಿ ಕಸದ ಲಾರಿ ಹರಿದು ವ್ಯಕ್ತಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಲಾರಿ ಹರಿದ ಪರಿಣಾಮ ರಾಮಯ್ಯ ದೇಹ ರಕ್ತಸಿಕ್ತವಾಗಿ ಬಿದ್ದಿದೆ. ಘಟನಾ ಸ್ಥಳಕ್ಕೆ ಚಿಕ್ಕಜಾಲ ಪೊಲೀಸರು ಭೇಟಿ ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

Share Post