Districts

ಸಿದ್ಧಗಂಗಾ ಶ್ರೀ 115ನೇ ಜಯಂತಿ ಹಿನ್ನೆಲೆ; 115 ಮಕ್ಕಳಿಗೆ ಶಿವಕುಮಾರ ಶ್ರೀ ಹೆಸರು ನಾಮಕರಣ

ತುಮಕೂರು: ಸಿದ್ದಗಂಗಾ ಮಠದಲ್ಲಿ ಇಂದು ಹಬ್ಬದ ವಾತಾವರಣ ನಿರ್ಮಾಣವಾಗಿದೆ. ಶಿವಕುಮಾರ ಶ್ರೀಗಳ 115 ನೇ ಜಯಂತಿ ಹಿನ್ನೆಲೆಯಲ್ಲಿ ಅದ್ದೂರಿ ಕಾರ್ಯಕ್ರಮಗಳು ನಡೆಯುತ್ತಿವೆ. ಇದರಲ್ಲಿ ರಾಹುಲ್‌ ಗಾಂಧಿ, ಅಮಿತ್‌ ಷಾ ಸೇರಿ ಹಲವು ಪ್ರಮುಖ ನಾಯಕರು ಭಾಗಿಯಾಗಿದ್ದಾರೆ. ಇನ್ನು ಇದೇ ವೇಳೆ 115 ಮಕ್ಕಳಿಗೆ ಶಿವಕುಮಾರ ಸ್ವಾಮೀಜಿ ಹೆಸರು ನಾಮಕರಣ ಮಾಡುವ ಕಾರ್ಯಕ್ರಮ ಮಠದ ಆವರಣದಲ್ಲಿ ನಡೆಯಿತು.

ಬೆಂಗಳೂರಿನ ಶಿವಕುಮಾರ ಸ್ವಾಮೀಜಿ ಅನ್ನದಾನ ಸೇವಾ ಟ್ರಸ್ಟ್‌ನಿಂದ ಮಕ್ಕಳಿಗೆ ನಾಮಕರಣ ಮಾಡಲಾಯಿತು. ರಾಜ್ಯದ ಹಲವೆಡೆಯಿಂದ ಮಕ್ಕಳನ್ನು ಕರೆತಂದು ಶಿವಕುಮಾರ ಎಂದು ನಾಮಕರಣ ಮಾಡಲಾಯಿತು. ಇದೇ ವೇಳೆ ಮಕ್ಕಳಿಗೆ ತೊಟ್ಟಿಲು, ಹಾಸಿಗೆ ಮುಂತಾದವುಗಳನ್ನು ಉಚಿತವಾಗಿ ವಿತರಿಸಲಾಯಿತು.

Share Post