Districts

ಮಧ್ಯಾಹ್ನದ ಬಿಸಿಯೂಟದ ಯೋಜನೆಗೆ ಶಿವಕುಮಾರಶ್ರೀ ಹೆಸರು; ಬೊಮ್ಮಾಯಿ ಘೋಷಣೆ

ತುಮಕೂರು: ಮಧ್ಯಾಹ್ನದ ಬಿಸಿಯೂಟ ಕಾರ್ಯಕ್ರಮಕ್ಕೆ ಶಿವಕುಮಾರಸ್ವಾಮೀಜಿ ಹೆಸರಿಡುತ್ತೇವೆ. ರಾಜ್ಯ ಸರ್ಕಾರದಿಂದ ಕೂಡಲೇ ಆದೇಶ ಹೊರಡಿಸುತ್ತೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಣೆ ಮಾಡಿದ್ದಾರೆ. ತುಮಕೂರಿನಲ್ಲಿ ಶಿವಕುಮಾರ ಸ್ವಾಮೀಜಿಯವರ 115 ಜಯಂತಿ ಪ್ರಯುಕ್ತ ನಡೆಯುತ್ತಿರುವ ಗುರುವಂದನಾ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಗಳು ಈ ಘೋಷಣೆ ಮಾಡಿದ್ದಾರೆ.

ಕಾರ್ಯಕ್ರಮದಲ್ಲಿ ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಮಾತನಾಡುತ್ತಾ, ಸಿದ್ದಗಂಗಾ ಶ್ರೀಗಳು ಅಕ್ಷರ ದಾಸೋಹ, ಅನ್ನದಾಸೋಹದ ಮೂಲಕ ನಡೆದಾಡುವ ದೇವರಾಗಿದ್ದರು. ಹೀಗಾಗಿ ರಾಜ್ಯ ಸರ್ಕಾರದ ಮಧ್ಯಾಹ್ನದ ಬಿಸಿಯೂಟದ ಯೋಜನೆ ಶಿವಕುಮಾರ ಶ್ರೀಗಳ ಹೆಸರಿಡಬೇಕೆಂದು ಮನವಿ ಮಾಡಿದರು. ಇದಕ್ಕೆ ಕೂಡಲೇ ಸ್ಪಂದಿಸಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು, ಬಿಸಿಯೂಟ ಯೋಜನೆಗೆ ಶಿವಕುಮಾರ ಶ್ರೀ ಹೆಸರಿಡಲಾಗುತ್ತದೆ. ಈ ಕೂಡಲೇ ಈ ಬಗ್ಗೆ ಆದೇಶ ಹೊರಡಿಸುತ್ತೇವೆ ಎಂದು ಹೇಳಿದರು.

ಸರ್ವೋದಯ ಹಾಗೂ ಅಂತ್ಯೋದಯ ಮಠದಲ್ಲಿ ನಡೆಯುತ್ತಿದೆ. ಬಡವರ ದೀನ ದಲಿತರಿಗೆ ವಿದ್ಯೆ ನೀಡುತ್ತಿದೆ. ಹೀಗಾಗಿ ಸರ್ಕಾರ ಯಾವಾಗಲೂ ಮಠದ ಪರವಾಗಿರುತ್ತದೆ ಎಂದು ಮುಖ್ಯಮಂತ್ರಿಗಳು ಇದೇ ಸಂದರ್ಭದಲ್ಲಿ ತಿಳಿಸಿದರು.

 

Share Post