Bengaluru

ಆಜಾನ್‌ ಸಂಬಂಧ ಹೊಸ ಆದೇಶ ಹೊರಡಿಸಿಲ್ಲ; ಸಿಎಂ ಬಸವರಾಜ ಬೊಮ್ಮಾಯಿ

ಬೆಂಗಳೂರು: ಆಜಾನ್‌ ವಿಚಾರಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯೆ ನೀಡಿದ್ದಾರೆ. ಈ ಸಂಬಂಧ ನಾವು ಯಾವುದೇ ಹೊಸ ಆದೇಶಗಳನ್ನು ಹೊರಡಿಸಿಲ್ಲ. ಇರುವ ಆದೇಶಗಳೆಲ್ಲಾ ಹಿಂದಿನದ್ದು ಎಂದು ಅವರು ಸ್ಪಷ್ಟನೆ ನೀಡಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಅವರು, ಮಸೀದಿಗಳಲ್ಲಿ ಆಜಾನ್‌ ಪಠಣೆ ಬಗ್ಗೆ ಹೈಕೋರ್ಟ್‌ ಆದೇಶ ನೀಡಿದೆ. ಈ ಹಿನ್ನೆಲೆಯಲ್ಲಿ ನಾವು ಯಾವುದೇ ಹೊಸ ಆದೇಶ ಹೊರಡಿಸಿಲ್ಲ. ನಮ್ಮ ಸರ್ಕಾರ ಕಾನೂನು, ಸುವ್ಯವಸ್ಥೆ ಕಾಪಾಡುತ್ತದೆ. ಎಲ್ಲರನ್ನೂ ನಾವು ವಿಶ್ವಾಸಕ್ಕೆ ತೆಗೆದುಕೊಳ್ಳುತ್ತೇವೆ. ಸಮಾಜದಲ್ಲಿ ಶಾಂತಿ ಹಾಳುಗೆಡವಲು ನಾವು ಬಿಡುವುದಿಲ್ಲ ಎಂದು ಸಿಎಂ ಬೊಮ್ಮಾಯಿ ಇದೇ ಸಂದರ್ಭದಲ್ಲಿ ತಿಳಿಸಿದ್ದಾರೆ.

Share Post