Bengaluru

ಚಂದ್ರು ಬಲ ತೊಡೆಗೆ ಇರಿದು ಕೊಲೆ ಮಾಡಲಾಗಿದೆ; ಪೊಲೀಸ್‌ ಆಯುಕ್ತ ಕಮಲ್‌ ಪಂತ್‌

ಬೆಂಗಳೂರು: ಜೆಜೆ ನಗರ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ನಡೆದ ಚಂದ್ರು ಕೊಲೆ ಪ್ರಕರಣ ಸಂಬಂಧ ಬೆಂಗಳೂರು ಪೊಲೀಸ್‌ ಆಯುಕ್ತ ಕಮಲ್‌ ಪಂತ್‌ ಟ್ವೀಟ್‌ ಮಾಡಿದ್ದು, ಘಟನೆಯ ಮಾಹಿತಿ ನೀಡಿದ್ದಾರೆ. ಆರೋಪಿಗಳಲ್ಲೊಬ್ಬ ಚಂದ್ರುವಿನ ಬಲ ತೊಡೆಗೆ ಚಾಕುವಿನಿಂದ ಇರಿದಿದ್ದಾನೆ ಎಂದು ಅವರು ಹೇಳಿದ್ದಾರೆ. 

ಕಮಲ್‌ ಪಂತ್‌ ಅವರ ಟ್ವೀಟ್‌ ವಿವರ ಇಲ್ಲಿದೆ:

ಜೆಜೆ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮಧ್ಯರಾತ್ರಿ (05.04.2022)ನಡೆದ ಕೊಲೆ ಪ್ರಕರಣ. ಸೈಮನ್ ರಾಜ್ ಮತ್ತು ಚಂದ್ರು ಇಬ್ಬರು ಮೈಸೂರು ರಸ್ತೆಯಲ್ಲಿ ಊಟಕ್ಕೆ ತೆರಳಿ ಹಿಂದಿರುಗುವಾಗ ಇವರ ಮತ್ತು ಶಾಹಿದ್ ಚಾಲನೆ ಮಾಡುತ್ತಿದ್ದ ಮತ್ತೊಂದು ಬೈಕುಗಳ ಪರಸ್ಪರ ತಗುಲಿದ ವಿಷಯವು ಗಲಾಟೆಗೆ ಕಾರಣವಾಗಿದ್ದು.

ಈ ಗಲಾಟೆಗೆ ಇತರರು ಸೇರಿಕೊಂಡಿರುತ್ತಾರೆ.ಗಲಾಟೆಯ ಸಂದರ್ಭದಲ್ಲಿ ಶಾಹಿದ್ ಚಂದ್ರುವಿನ ಬಲ ತೊಡೆಗೆ ಇರಿದು ಘಟನಾ ಸ್ಥಳದಿಂದ ಪರಾರಿಯಾಗಿರುತ್ತಾರೆ.ಗಾಯಾಳುವನ್ನು ವಿಕ್ಟೋರಿಯಾ ಆಸ್ಪತ್ರೆಗೆ ಸೇರಿಸಲಾಗಿ ತೀವ್ರ ರಕ್ತ ಸ್ರಾವದಿಂದ ಸಾವನ್ನಪ್ಪಿದ್ದು,ಈ ಪ್ರಕರಣಕ್ಕೆ ಸಂಬಂಧಿಸಿದಂತೆ 3 ಜನ ಆರೋಪಿಗಳನ್ನು ಬಂಧಿಸಲಾಗಿದೆ & ತನಿಖೆ ಮುಂದುವರೆದಿದೆ.

Share Post