Bengaluru

ಪತ್ನಿಯನ್ನು ಕೊಂದು ಪರಾರಿಯಾಗಿದ್ದ ಪಾಪಿ ಗಂಡ ಅರೆಸ್ಟ್‌

ಬೆಂಗಳೂರು: ಪತ್ನಿಯನ್ನು ಕೊಂದು ಮೃತದೇಹವನ್ನು ಮನೆಯಲ್ಲೇ ಬಿಟ್ಟು ಪರಾರಿಯಾಗಿದ್ದ ಪಾಪಿ ಪತಿಯನ್ನು ಕಾಮಾಕ್ಷಿಪಾಳ್ಯ ಪೊಲೀಸರು ಬಂಧಿಸಿದ್ದಾರೆ. ಕಾಮಾಕ್ಷಿಪಾಳ್ಯ ಠಾಣಾ ವ್ಯಾಪ್ತಿಯ ಕಾವೇರಿಪುರದ ನಿವಾಸಿ ವನಜಾಕ್ಷಿ ಕೊಲೆಯಾದ ಮಹಿಳೆ. ಈ ಸಂಬಂಧ ಆಕೆಯ ಪತಿ ಅಶೋಕ್‌ನನ್ನು ಪೊಲೀಸರು ಬಂಧಿಸಿದ್ದಾರೆ.

ಆರೋಪಿ ಅಶೋಕ್‌ ಕಾರು ಚಾಲಕನಾಗಿ ಕೆಲಸ ಮಾಡುತ್ತಿದ್ದ. ಕೆಲ ವರ್ಷಗಳ ಹಿಂದೆ ವನಜಾಕ್ಷಿಯನ್ನು ಮದುವೆಯಾಗಿದ್ದ ಅಶೋಕ್‌, ಕಾವೇರಿಪುರದಲ್ಲಿ ಬಾಡಿಗೆ ಮನೆಯಲ್ಲಿ ನೆಲೆಸಿದ್ದರು. ಕೌಟುಂಬಿಕ ಕಲಹದಿಂದಾಗಿ ಆಗಾಗ ಜಗಳ ನಡೆಯುತ್ತಿತ್ತು. ಏಪ್ರಿಲ್‌ 17 ರಂದು ಕೂಡಾ ದೊಡ್ಡ ಜಗಳ ನಡೆದಿದ್ದು, ಈ ವೇಳೆ ಅಶೋಕ್‌ ತನ್ನ ಪತ್ನಿ ವನಜಾಕ್ಷಿಯನ್ನು ಕೊಲೆ ಮಾಡಿದ್ದಾನೆ. ನಂತರ ದಿಕ್ಕುತೋಚದೆ ಮೃತದೇಹವನ್ನು ಮನೆಯಲ್ಲೇ ಬಿಟ್ಟು ಪರಾರಿಯಾಗಿದ್ದ. ಮೃತದೇಹ ಕೊಳೆತು ವಾಸನೆ ಬರಲು ಶುರುವಾದ ಅಕ್ಕಪಕ್ಕದವರಿಗೆ ವನಜಾಕ್ಷಿ ಕೊಲೆಯಾಗಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ.

Share Post