National

ಉಗ್ರರು-ಭದ್ರತಾಪಡೆಗಳ ನಡುವೆ ಗುಂಡಿನ ಚಕಮಕಿ; ಉಗ್ರ ಮೊಹಮದ್‌ ಯೂಸುಫ್‌ ಹತ್ಯೆ

ಶ್ರೀನಗರ: ಕಾಶ್ಮೀರದಲ್ಲಿ ಭದ್ರತಾ ಪಡೆಗಳು ಹಾಗೂ ಉಗ್ರರ ನಡುವೆ ಗುಂಡಿನ ಚಕಮಕಿ ನಡೆದಿದೆ. ಇದ್ರಲ್ಲಿ ಲಷ್ಕರ್‌ ಎ ತೊಯ್ಬಾ ಸಂಘಟನೆಯ ಕಮಾಂಡರ್‌ ಮೊಹಮದ್‌ ಯೂಸುಫ್‌ ಕಂತ್ರೂ ಹತ್ಯೆಯಾಗಿದೆ. ಘಟನೆಯಲ್ಲಿ ಮೂವರು ಭಾರತೀಯ ಯೋಧರು ಹಾಗೂ ಒಬ್ಬ ನಾಗರಿಕ ಗಾಯಗೊಂಡಿದ್ದಾನೆ ಎಂದು ತಿಳಿದುಬಂದಿದೆ.

ಉತ್ತರ ಕಾಶ್ಮೀರದ ಬಾರಾಮುಲ್ಲ ಜಿಲ್ಲೆಯ ಪರಿಸ್ವಾನಿ ಪ್ರದೇಶದಲ್ಲಿ ಈ ಗುಂಡಿನ ಚಕಮಕಿ ನಡೆದಿದೆ. ಹತ್ಯೆಯಾದ ಉಗ್ರ ಯೂಸುಫ್‌ ಕಂತ್ರೂ, ಬುಡ್ಗಾಂ ಜಿಲ್ಲೆಯಲ್ಲಿ ಇತ್ತೀಚೆಗೆ ಹತ್ಯೆಯಾದ ವಿಶೇಷ ಪೊಲೀಸ್‌ ಅಧಿಕಾರಿ ಹಾಗೂ ಅವರ ಸಹೋದರ ಹಾಗೂ ಯೋಧ ಹಾಗೂ ನಾಗರಿಕರೊಬ್ಬರ ಹತ್ಯೆಯಲ್ಲಿ ಭಾಗಿಯಾಗಿದ್ದ. ನ್‌ಕೌಂಟರ್‌ ಆರಂಭದ ಹಂತದಲ್ಲಿ ಮೂವರು ಯೋಧರು ಹಾಗೂ ನಾಗರಿಕರೊಬ್ಬರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಅವರನ್ನು ಆಸ್ಪತ್ರೆಗೆ ಸೇರಿಸಲಾಗಿದೆ.

Share Post