National

ಪಿಎಸ್‌ಐ ನೇಮಕಾತಿ ಅಕ್ರಮ ವಿಚಾರ; ಕಿಂಗ್‌ಪಿನ್‌ ರುದ್ರೇಗೌಡ ಬಂಧನ

ಬೆಂಗಳೂರು: ಪಿಎಸ್‌ಐ ಅಕ್ರಮ ನೇಮಕಾತಿ ಅಕ್ರಮದ ತನಿಖೆ ವೇಗವಾಗಿ ನಡೆಯುತ್ತಿದೆ. ಸಿಐಡಿ ಅಧಿಕಾರಿಗಳು ಆರೋಪಿಗಳಾಗಿ ಜಾಲಾಡುತ್ತಿದ್ದಾರೆ. ಅಕ್ರಮದ ಕಿಂಗ್‌ಪಿನ್‌ ಎನ್ನಲಾದ ರುದ್ರೇಗೌಡನನ್ನು ಪೊಲೀಸರು ಕೊನೆಗೂ ಬಂಧಿಸಿದ್ದಾರೆ ಎಂದು ತಿಳಿದುಬಂದಿದೆ. ಅಕ್ರಮ ಬಯಲಾದ ದಿನದಿಂದ ರುದ್ರೇಗೌಡ ತಲೆಮರೆಸಿಕೊಂಡಿದ್ದ. ಆದ್ರೆ ಇದೀಗ ರುದ್ರೇಗೌಡ, ಸಿಐಡಿ ಅಧಿಕಾರಿಗಳಿಗೆ ಸಿಕ್ಕಿಬಿದ್ದಿದ್ದಾನೆ ಎಂದು ತಿಳಿದುಬಂದಿದೆ. ಅಧಿಕೃತ ಮಾಹಿತಿಯಷ್ಟೇ ಹೊರಬೀಳಬೇಕಿದೆ.

ಆರೋಪಿ ರುದ್ರೇಗೌಡ ಮಹಾರಾಷ್ಟ್ರದಲ್ಲಿ ತಲೆಮರೆಸಿಕೊಂಡಿದ್ದನೆಂದು ತಿಳಿದುಬಂದಿದೆ. ಮೊಬೈಲ್‌ ಸಿಗ್ನಲ್‌ ಸೇರಿದಂತೆ, ಹಲವು ಮೂಲಗಳ ಖಚಿತ ಮಾಹಿತಿ ಆಧರಿಸಿ ದಾಳಿ ನಡೆಸಿದಾಗ ರುದ್ರೇಗೌಡ ಸಿಕ್ಕಿಬಿದ್ದಿದ್ದಾನೆ ಎಂದು ತಿಳಿದುಬಂದಿದೆ. ಆರೋಪಿಯನ್ನು ಬೆಂಗಳೂರಿಗೆ ಕರೆತರಲಾಗುತ್ತಿದೆ ಎಂದು ಹೇಳಲಾಗಿದೆ.

ರುದ್ರೇಗೌಡ ಮಹಾರಾಷ್ಟ್ರದ ಸೊಲ್ಲಾಪುರದಲ್ಲಿದ್ದಾರೆ ಎಂಬ ಮಾಹಿತಿ ಬಂದಿತ್ತು. ಮೊಬೈಲ್‌ ಟವರ್‌ ಲೊಕೇಷನ್‌ ಆಧಾರದ ಹಿನ್ನೆಲೆಯಲ್ಲಿ ಸಿಐಡಿ ಅಧಿಕಾರಿಗಳು ನಿನ್ನೆ ಸೊಲ್ಲಾಪುರಕ್ಕೆ ಹೋಗಿದ್ದರು.

Share Post