Districts

ಅಮಾನತುಗೊಂಡಿದ್ದ ಗ್ರಾಪಂ ಅಭಿವೃದ್ಧಿ ಅಧಿಕಾರಿ ಆತ್ಮಹತ್ಯೆ

ರಾಮನಗರ: ಅಕ್ರಮವಾಗಿ ಇ-ಖಾತೆ ಮಾಡಿಕೊಟ್ಟ ಕಾರಣ ಅಮಾನತುಗೊಂಡಿದ್ದ ಪಂಚಾಯತ್‌ ಡೆವೆಲಪ್‌ಮೆಂಟ್‌ ಆಫೀಸರ್‌ ಒಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.  ಬಿಡದಿ ಹೋಬಳಿ ಬೈರಮಂಗಲ ಗ್ರಾಮ ಪಂಚಾಯಿತಿ ಪಿಡಿಒ ರವಿ ಆತ್ಮಹತ್ಯೆ ಮಾಡಿಕೊಂಡ ಅಧಿಕಾರಿ. ಇವರು ಕನಕಪುರ ತಾಲ್ಲೂಕಿನ ಕೊಳ್ಳಿಗನಹಳ್ಳಿಯ ಅವರ ನಿವಾಸದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.

ಹಾರೋಹಳ್ಳಿ, ಬೈರಮಂಗಲ ಸೇರಿದಂತೆ ಹಲವು ಕಡೆ ಅಕ್ರಮವಾಗಿ ಇ-ಖಾತೆ ಮಾಡಿಕೊಟ್ಟ ಆರೋಪ ಇವರ ಮೇಲಿತ್ತು. ಈ ಕಾರಣದಿಂದ ರವಿ ವಿರುದ್ಧ ಹಲವರು ಪ್ರಕರಣಗಳು ದಾಖಲಿಸಿದ್ದರು. ಬೆಂಗಳೂರು ಸೈಬರ್ ಕ್ರೈಂ ಪೊಲೀಸರು ಕೆಲ ತಿಂಗಳ ಹಿಂದೆ ಬೈರಮಂಗಲ ಗ್ರಾ.ಪಂ. ಕಚೇರಿ ಮೇಲೂ ದಾಳಿ ನಡೆಸಿದ್ದರು.

ಆರೋಪಗಳು ಮೇಲ್ನೋಟಕ್ಕೆ ಸಾಬೀತಾದ ಹಿನ್ನೆಲೆಯಲ್ಲಿ ರವಿ ಅವರನ್ನು ಜಿ.ಪಂ. ಸಿಇಒ ಇಕ್ರಂ ಈಚೆಗೆ ಸೇವೆಯಿಂದ ಅಮಾನತು‌ ಮಾಡಿದ್ದರು.

Share Post