Bengaluru

2023 ಡಿಸೆಂಬರ್‌ಗೆ ಸಿದ್ದರಾಮಯ್ಯ ಕಾಂಗ್ರೆಸ್‌ನಿಂದ ಸಸ್ಪೆಂಡ್‌ ಆಗುತ್ತಾರೆ; ಸಚಿವ ಮುನಿರತ್ನ

ಬೆಂಗಳೂರು: ಮುಂದಿನ ವರ್ಷದ ಡಿಸೆಂಬರ್‌ ಒಳಗೆ ಕಾಂಗ್ರೆಸ್ ಪಕ್ಷದಿಂದ ಮಾಜಿ ಸಿಎಂ ಸಿದ್ದರಾಮಯ್ಯರನ್ನು  ಸಸ್ಪೆಂಡ್ ಮಾಡುತ್ತಾರೆ ಎಂದು ಸಚಿವ ಮುನಿರತ್ನ ಭವಿಷ್ಯ ನುಡಿದಿದ್ದಾರೆ. ವಿಕಾಸಸೌಧದ ಕಚೇರಿಯಲ್ಲಿ ಮಾತನಾಡಿದ ಅವರು, ಮುಂದಿನ ವರ್ಷ ಸಿದ್ದರಾಮಯ್ಯ ಕಾಂಗ್ರೆಸ್‌ನಲ್ಲಿ ಇರೋದಿಲ್ಲ ಎಂದು ಹೇಳಿದರು.

   1994 ರಲ್ಲಿ ರಾಮಕೃಷ್ಣ ಹೆಗಡೆಯವರು ಇದ್ದ ಜಾಗದಲ್ಲಿ ಸಿದ್ದರಾಮಯ್ಯ ಇದ್ದಾರೆ. ಅಂದು ಹೆಗಡೆಯವರನ್ನು ಸಿಎಂ ಇಬ್ರಾಹಿಂ ಪಕ್ಷದಿಂದ ಹೊರ ಹಾಕಿದ್ರು. ಈಗ ಸಿದ್ದರಾಮಯ್ಯರನ್ನು ಕಾಂಗ್ರೆಸ್ ಇಂದ ಹೊರ ಹಾಕಲು ಸಂಚು ನಡೀತಿದೆ ಎಂದು ಮುನಿರತ್ನ ಹೇಳಿದ್ರು.  2023 ರ ಒಳಗೆ ಸಿದ್ದರಾಮಯ್ಯರನ್ನು ಕಾಂಗ್ರೆಸ್​ನಿಂದ ಹೊರಹಾಕ್ತಾರೆ. ಬಳಿಕ ಸಿದ್ದರಾಮಯ್ಯ ಕಾಂಗ್ರೆಸ್​ನಲ್ಲಿ ಇರಲ್ಲ. ಹಿಂದೆ ರಾಮಕೃಷ್ಣ ಹೆಗಡೆಯವರಿಗೆ ಆಗಿದ್ದ ಸ್ಥಿತಿಯೇ ಸಿದ್ದರಾಮಯ್ಯ ಅವರಿಗೆ ಆಗುತ್ತಿದೆ. ಇಬ್ರಾಹಿಂ ಕಾಂಗ್ರೆಸ್ ಬಿಟ್ಟು ಹೋಗಿರುವುದೇ ಅದೇ ಕಾರಣಕ್ಕೆ. ಸಿದ್ದರಾಮಯ್ಯನನ್ನು 2023ಕ್ಕೆ ಪಾರ್ಟಿಯಿಂದಲೇ ಸಸ್ಪೆಂಡ್ ಮಾಡಿಸ್ತಾರೆ ನೋಡಿ ಎಂದರು.

Share Post