Bengaluru

ಪರಿಷತ್‌ ಏಳು ಸ್ಥಾನಗಳಿಗೆ ಚುನಾವಣಾ ದಿನಾಂಕ ಘೋಷಣೆ

ಬೆಂಗಳೂರು:  ವಿಧಾನಪರಿಷತ್‌ನ ತೆರವಾದ ಏಳು ಸ್ಥಾನಗಳಿಗೆ ಚುನಾವಣೆ ದಿನಾಂಕ ಘೊಷಣೆಯಾಗಿದೆ. ಜೂನ್‌ 3 ರಂದು ಮತದಾನ ನಡೆಸಲಾಗುವುದು ಎಂದು ರಾಜ್ಯ ಚುನಾವಣಾ ಆಯೋಗ ಹೇಳಿದೆ. ಮೇ 17ಕ್ಕೆ ವಿಧಾನಪರಿಷತ್‌ ಚುನಾವಣಾ ಅಧಿಸೂಚನೆ ಪ್ರಕಟವಾಗಲಿದೆ.

 

ಬಿಜೆಪಿಯ ಲಕ್ಷಣ ಸವದಿ, ಲೆಹರ್‌ ಸಿಂಗ್‌ ಕಾಂಗ್ರೆಸ್‌ನ ಆರ್‌ಬಿ ತಿಮ್ಮಾಪೂರ್‌, ಅಲ್ಲಂ ವೀರಭದ್ರಪ್ಪ , ವೀಣಾ ಅಚ್ಚಯ್ಯ ಮತ್ತು ಜೆಡಿಎಸ್‌ನ ರಮೇಶ್‌ ಗೌಡ, ನಾರಾಯಣ ಸ್ವಾಮಿ ಅವರ ಅವಧಿ ಜೂನ್‌ 14ಕ್ಕೆ ಕೊನೆಯಾಗಲಿದೆ. ಈ ಹಿನ್ನೆಲೆಯಲ್ಲಿ ಚುನಾವಣೆ ನಡೆಸಲಾಗುತ್ತಿದೆ. ಮೇ 17ಕ್ಕೆ ಅಧಿಸೂಚನೆ ಪ್ರಕಟವಾಗಲಿದ್ದು, ಮೇ 24 ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದೆ. ಈ ಚುನಾವಣೆಯಲ್ಲಿ ಬಿಜೆಪಿಯ 4, ಕಾಂಗ್ರೆಸ್‌ನ 2, ಜೆಡಿಎಸ್‌ನ ಒಬ್ಬರು ಸದಸ್ಯರು ಆಯ್ಕೆಯಾಗುವ ಸಾಧ್ಯತೆಯಿದೆ.

 

 

 

Share Post