Bengaluru

ಬಿಜೆಪಿಗೆ ಒಳ್ಳೆ ಹುಲ್ಲುಗಾವಲು ಸಿಕ್ಕಿದೆ, ಚೆನ್ನಾಗಿ ಮೇಯುತ್ತಿದ್ದಾರೆ; ಹೆಚ್ಡಿಕೆ

ಬೆಂಗಳೂರು: ರಾಜ್ಯದ ಬಿಜೆಪಿ ನಾಯಕರಿಗೆ ಒಳ್ಳೆಯ ಹಾಗೂ ವಿಶಾಲವಾದ ಹುಲ್ಲುಗಾವಲು ಸಿಕ್ಕಿದೆ, ಅದ್ರಲ್ಲಿ ಚೆನ್ನಾಗಿ ಮೇಯುತ್ತಿದ್ದಾರೆ ಎಂದು ಮಾಜಿಸಿಎಂ ಹೆಚ್‌.ಡಿ.ಕುಮಾರಸ್ವಾಮಿ ಲೇವಡಿ ಮಾಡಿದ್ದಾರೆ. ಮಹಾಲಕ್ಷ್ಮೀ ಲೇಔಟ್​ನಲ್ಲಿ ಹಮ್ಮಿಕೊಂಡಿದ್ದ ಜನತಾ ಜಲಧಾರೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನಮ್ಮ ಪಕ್ಷ ಅಧಿಕಾರಕ್ಕೆ ಬಂದರೆ ಕೆರೆ-ಕೋಡಿಗಳನ್ನು ನುಂಗಿದವರನ್ನು ಖಾಲಿ ಮಾಡಿಸುತ್ತೇವೆ ಹಾಗೂ ಆ ಕೆರೆಗಳಿಗೆ ಪೂರ್ವ ವೈಭವ ತಂದು ನದಿ ಜಲವನ್ನು ತುಂಬಿಸುತ್ತೇವೆ ಎಂದರು.

 

    ನಾನು 25 ಸಾವಿರ ಕೋಟಿ ರೂಪಾಯಿ ರೈತರ ಸಾಲ ಮನ್ನಾ ಮಾಡದೇ ಇದ್ದಿದ್ದರೆ ಎಂಟು ಸಾವಿರ ಕೋಟಿ ರೂಪಾಯಿ ಕಮಿಷನ್ ಸಿಗುತ್ತಿತ್ತು. ನಾನು ಬೆಂಗಳೂರಿನಲ್ಲಿ ಚರಂಡಿ ಕ್ಲೀನ್ ಮಾಡುವುದಕ್ಕೆ, ವೈಟ್ ಟ್ಯಾಪಿಂಗ್ ಮಾಡುವುದಕ್ಕೆ ಅದೇ ಹಣವನ್ನು ಕೊಟ್ಟು ಕಮಿಷನ್ ಪಡೆದಿದ್ದರೆ ಬಿಜೆಪಿ, ಕಾಂಗ್ರೆಸ್​ಗಿಂತ ಚೆನ್ನಾಗಿ ಚುನಾವಣೆ ಮಾಡಬಹುದಿತ್ತು. ನಮ್ಮ ಶಾಸಕರಿಗೆ ಆ ಹಣವನ್ನು ಹಂಚಿ, ಕೊಳ್ಳೆ ಹೊಡೆಯಬಹುದಿತ್ತು. ಈಗ ಬಿಜೆಪಿಯವರು 40 ಪರ್ಸೆಂಟ್‌ ಕಮಿಷನ್ ಹೊಡೆಯುತ್ತಿದ್ದಾರೆ ಎಂದು ಆರೋಪಿಸಿದರು.

 

Share Post