Bengaluru

ರಾಜ್ಯಸಭೆ, ಪರಿಷತ್‌ ಚುನಾವಣೆ; ಬಿಜೆಪಿ ಕೋರ್‌ ಕಮಿಟಿಯಲ್ಲಿ ಚರ್ಚೆ

ಬೆಂಗಳೂರು; ರಾಜ್ಯ ಬಿಜೆಪಿ ಕೋರ್‌ ಕಮಿಟಿ ಸಭೆಯಲ್ಲಿರಾಜ್ಯ ಉಸ್ತುವಾರಿ ಅರುಣ್ ಸಿಂಗ್, ಬಿ.ಎಲ್.ಸಂತೋಷ್ ಅವರು ಭಾಗವಹಿಸುತ್ತಿದ್ದಾರೆ. ರಾಜಕೀಯ ಸ್ಥಿತಿಗತಿ ಬಗ್ಗೆ ಚರ್ಚೆ ಮಾಡುತ್ತೇವೆ ಎಂದು ಸಿಎಂ ಬೊಮ್ಮಾಯಿ ಹೇಳಿದ್ದಾರೆ.

 

ಬೆಂಗಳೂರಿನಲ್ಲಿ ಮಾತನಾಡಿದ ಅವರು, ರಾಜ್ಯಸಭೆ, ವಿಧಾನ ಪರಿಷತ್‌ ಸೇರಿ ವಿವಿಧ ಚುನಾವಣೆಗಳು ಘೋಷಣೆ ಆಗಿವೆ. ಅಭ್ಯರ್ಥಿಗಳ ಆಯ್ಕೆ ಬಗ್ಗೆ ಚರ್ಚೆ ಮಾಡುತ್ತೇವೆ. ಹಲವು ವಿಚಾರಗಳ ಚರ್ಚೆ ಆಗುತ್ತದೆ‌ ಎಂದು ಹೇಳಿದರು. ಇದೇ ವೇಳೆ ದಾವೋಸ್ ಪ್ರವಾಸದ ಬಗ್ಗೆ ಮಾತನಾಡಿದ ಸಿಎಂ ಬೊಮ್ಮಾಯಿ, ಪ್ರವಾಸದ ಬಗ್ಗೆ ಇಂದು ತೀರ್ಮಾನ ಮಾಡುತ್ತೇನೆ. ದಾವೋಸ್​​ಗೆ ನನ್ನನ್ನೂ ಸೇರಿ ಇಬ್ಬರು ಸಿಎಂಗಳಿಗೆ ಆಹ್ವಾನ ಬಂದಿದೆ. ಹಾಗಾಗಿ ಇದು ಬಹಳ ಮುಖ್ಯವಾದ ಕಾರ್ಯಕ್ರಮ. ಆದ್ರೆ ಇದು ಚುನಾವಣೆ ಸಮಯವಾದ್ದರಿಂದ ಎಷ್ಟು ದಿನ ಹೋಗಬೇಕು, ಯಾವತ್ತು ಹೋಗಬೇಕು ಎಂದು ಇಂದು ಮಧ್ಯಾಹ್ನ ತೀರ್ಮಾನ ಮಾಡುತ್ತೇನೆ ಎಂದರು.

Share Post