NationalPolitics

ಪ್ರಧಾನಿ ಮೋದಿ ಹಿಂದೂ ವಿರೋಧಿ ಎಂದ ಬಿಜೆಪಿ ನಾಯಕ

ಬೆಂಗಳೂರು; ಪ್ರಧಾನಿ ನರೇಂದ್ರ ಮೋದಿಯವರು ಹಿಂದೂ ವಿರೋಧಿಯಾಗಿದ್ದಾರೆ ಎಂದು ಬಿಜೆಪಿ ನಾಯಕ ಹಾಗೂ ರಾಜ್ಯಸಭಾ ಸದಸ್ಯ ಸುಬ್ರಮಣಿಯನ್‌ ಸ್ವಾಮಿಯವರು ಕಿಡಿಕಾರಿದ್ದಾರೆ. ಈ ಬಗ್ಗೆ ಟ್ವೀಟ್‌ ಮಾಡಿರುವ ಅವರು, ಪ್ರಧಾನಿ ನರೇಂದ್ರ ಮೋದಿ ಅವರು ಚುನಾವಣೆ ವೇಳೆ ಪಕ್ಷದ ಪ್ರಣಾಳಿಕೆಯಲ್ಲಿ ನೀಡಿದ್ದ ಭರವಸೆಗಳಿಗೆ ಒತ್ತು ನೀಡಿಲ್ಲ ಎಂದು ಆರೋಪಿಸಿದ್ದಾರೆ. 

ನರೇಂದ್ರ ಮೋದಿ ಅವರು ಪ್ರಧಾನಿಯಾಗಿ ಬಿಜೆಪಿ ಪ್ರಣಾಳಿಕೆ ಭರವಸೆಗಳನ್ನು ಎತ್ತಿಹಿಡಿಯದೆ ಹಿಂದೂ ವಿರೋಧಿಯಾಗಿದ್ದಾರೆ. ರಾಮ ಮಂದಿರ ಕುರಿತಾದ ಸುಪ್ರೀಂ ಕೋರ್ಟ್‌ ನಿರ್ಣಯವನ್ನು ವಿಳಂಬಗೊಳಿಸಲು ಪ್ರಯತ್ನಿಸಲಾಗುತ್ತಿದೆ. ಐತಿಹಾಸಿಕ ರಾಮ ಸೇತುವಿಗೆ ಪ್ರಾಚೀನ ಪರಂಪರೆಯ ಸ್ಥಾನಮಾನ ನೀಡುವುದಕ್ಕೆ ವಿಳಂಬವಾಗುತ್ತಿದೆ. ಉತ್ತರಾಖಂಡದ ಹಳೆಯ ದೇವಸ್ಥಾನಗಳನ್ನು ಸರ್ಕಾರದ ಸುಪರ್ದಿಗೆ ತೆಗೆದುಕೊಳ್ಳಲಾಗಿದೆ. 1991ರ ಪೂಜಾ ಸ್ಥಳಗಳ ಕಾಯಿದೆಯನ್ನು ಹಿಂತೆಗೆದುಕೊಳ್ಳಲು ನಿರಾಕರಿಸಲಾಗುತ್ತಿದೆ ಎಂದು ಸುಬ್ರಮಣಿಯನ್‌ ಸ್ವಾಮಿ ತಮ್ಮ ಟ್ವೀಟ್‌ನಲ್ಲಿ ಆಪಾದಿಸಿದ್ದಾರೆ.

Share Post