Districts

ಬಿಎಸ್‌ವೈ ಶಕ್ತಿ ಕುಂದಿಸಲು ಯಾರಿಂದಲೂ ಸಾಧ್ಯವಿಲ್ಲ; ವಿಜಯೇಂದ್ರ

ಮೈಸೂರು; ಬಿಎಸ್‌ವೈ ಶಕ್ತಿ ಕುಂದಿಸಲು ಯಾರಿಂದಲೂ ಸಾಧ್ಯವಿಲ್ಲ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದ್ದಾರೆ. ಪರಿಯಾಪಟ್ಟಣದಲ್ಲಿ ಮಾತನಾಡಿದ ಅವರು, ಯಡಿಯೂರಪ್ಪ ಅವರನ್ನು ಯಾರೂ ಕಡೆಗಣಿಸಿಲ್ಲ ಎಂದು ಸ್ಪಷ್ಟಪಡಿಸಿದರು.

ಸ್ಥಾನಮಾನ ನೀಡುವ ಬಗ್ಗೆ ನಮ್ಮ ಕೇಂದ್ರದ ನಾಯಕರು ತೀರ್ಮಾನ ಮಾಡುತ್ತಾರೆ ಎಂದ ಅವರು, ಯಡಿಯೂರಪ್ಪ ಅವರ ಶಕ್ತಿ ಏನೆಂಬುದು ಇಡೀ ರಾಜ್ಯಕ್ಕೆ ಗೊತ್ತಿದೆ. ಬಿಜೆಪಿ ಇಲ್ಲದೆ ಬಿಎಸ್‌ವೈ ಇಲ್ಲ, ಬಿಎಸ್‌ವೈ ಇಲ್ಲದೆ ಬಿಜೆಪಿ ಇಲ್ಲ ಎಂದು ಹೇಳಿದರು.

Share Post