BengaluruPolitics

ಕಾಂಗ್ರೆಸ್‌ ಪ್ರತಿಭಟನೆ ಹಿನ್ನೆಲೆ; ಬೆಂಗಳೂರಿನ ಹಲವೆಡೆ ಟ್ರಾಫಿಕ್‌ ಜಾಮ್‌

ಬೆಂಗಳೂರು; ಸೋನಿಯಾಗಾಂಧಿ ಹಾಗೂ ರಾಹುಲ್‌ ಗಾಂಧಿಗೆ ಸಮನ್ಸ್‌ ನೀಡಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್‌ ದೇಶಾದ್ಯಂತ ಪ್ರತಿಭಟನೆ ನಡೆಸುತ್ತಿದೆ. ಬೆಂಗಳೂರಿನಲ್ಲಿ ಕಾಂಗ್ರೆಸ್‌ ನಾಯಕರು ಪ್ರತಿಭಟನೆ ನಡೆಸಿದ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ತೊಂದರೆಯುಂಟಾಗಿದೆ. ಶಾಂತಿನಗರ, ಲಾಲ್‌ಬಾಗ್‌ ಸುತ್ತಮುತ್ತ ಟ್ರಾಫಿಕ್‌ ಜಾಮ್‌ ಉಂಟಾಗಿ, ಸಾರ್ವಜನಿಕರು ಪರದಾಡಿದ್ದಾರೆ.

 

ಎರಡು ಗಂಟೆಗಳಿಂದ ಈ ಭಾಗಗಳಲ್ಲಿ ಟ್ರಾಫಿಕ್‌ ಜಾಮ್‌ ಉಂಟಾಗಿದ್ದು, ವಾಹನ ಸವಾರರು ಪರದಾಡುತ್ತಿದ್ದಾರೆ. ಇನ್ನೊಂದೆಡೆ ಪೊಲೀಸರು ಪ್ರತಿಭಟನಾಕಾರರನ್ನು ವಶಕ್ಕೆ ಪಡೆದಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌, ವಿಪಕ್ಷ ನಾಯಕ ಸಿದ್ದರಾಮಯ್ಯ ಸೇರಿ ಹಲವರನ್ನು ವಶಕ್ಕೆ ಪಡೆಯಲಾಗಿದೆ. ಬಸ್‌ ಒಂದರನ್ನು ಪ್ರತಿಭಟನಾಕಾರರನ್ನು ಸ್ಥಳಾಂತರಿಸಲಾಗಿದೆ.

Share Post