Districts

ರಾಜ್ಯದಲ್ಲಿ ಮತ್ತೆ ಕಂಪಿಸಿತು ಭೂಮಿ; ಸುಳ್ಯ ತಾಲ್ಲೂಕಿನಲ್ಲಿ ನಡುಗಿದ ಭೂಮಿ

ಸುಳ್ಯ; ಎರಡು ದಿನಗಳ ಹಿಂದೆ ಹಾಸನ, ಕೊಡಗು, ಮಂಡ್ಯ, ಮೈಸೂರು ಜಿಲ್ಲೆಯ ಕೆಲವೆಡೆ ಭೂಮಿ ನಡುಗಿತ್ತು. ಇದೀಗ ದಕ್ಷಿಣ ಕನ್ನಡ ಜಿಲ್ಲೆ ಸುಳ್ಯ ತಾಲ್ಲೂಕಿನ ಕೆಲವು ಗ್ರಾಮದಲ್ಲಿ ಭೂಮಿ ನಡುಗಿದ ಅನುಭವವಾಗಿದೆ. ಮರ್ಕಂಜ, ಕೊಡಪ್ಪಾಲ, ಗೂನಡ್ಕ , ಅರಂತೋಡು ಮೊದಲಾದ ಕಡೆಗಳಲ್ಲಿ ಬೆಳಗ್ಗೆ 9.10 ರಿಂದ 9.15 ರ ಆಸುಪಾಸಿನಲ್ಲಿ ಭೂಮಿ ಕಂಪಿಸಿದ ಅನುಭವ ಹಲವರಿಗೆ ಆಗಿದೆ.

ಇನ್ನು ಕೊಡಗು ಜಿಲ್ಲೆಯ ಕೆಲವೆಡೆಯೂ ಭೂಮಿ ನಡುಗಿದೆ ಎಂದು ಹೇಳಲಾಗುತ್ತಿದೆ. ಆದ್ರೆ ಅಧಿಕಾರಿಗಳಿಂದ ಇನ್ನೂ ಅಧಿಕೃತ ಮಾಹಿತಿ ಬಂದಿಲ್ಲ. ತಿಂಗಳ ಹಿಂದೆ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಭೂಮಿ ನಡುಗಿತ್ತು. ಈಗ ಹಾಸನ, ಮೈಸೂರು, ಮಂಗಳೂರು ಸುತ್ತಮುತ್ತಲ ಪ್ರದೇಶಗಳಲ್ಲಿ ಭುಮಿ ನಡುಗುತ್ತಿದೆ. ಹೀಗಾಗಿ ಈ ಭಾಗದ ಜನರಲ್ಲಿ ಕೊಂಚ ಆತಂಕ ಶುರುವಾಗಿದೆ.

Share Post