CrimeNational

ಕನ್ಹಯ್ಯಲಾಲ್‌ ಹತ್ಯೆಯನ್ನು ನಾಗರಿಕ ಸಮಾಜ ಖಂಡಿಸಬೇಕು; ಬಿ.ಕೆ.ಹರಿಪ್ರಸಾದ್‌

ನವದೆಹಲಿ; ಉದಯಪುರದಲ್ಲಿ ಕನ್ಹಯ್ಯ ಲಾಲ್‌ ಹತ್ಯೆ ಅತ್ಯಂತ ಘೋರ ಕೃತ್ಯ. ಇದನ್ನು ಎಲ್ಲರೂ ಖಂಡಿಸಲೇಬೇಕು. ಇಂತಹ ಘಟನೆಗಳನ್ನು ಯಾರೂ ಬೆಂಬಲಿಸಬಾರದು ಎಂದು ವಿಧಾನಪರಿಷತ್‌ ವಿರೋಧ ಪಕ್ಷದ ನಾಯಕ ಬಿ.ಕೆ.ಹರಿಪ್ರಸಾದ್‌ ಹೇಳಿದ್ದಾರೆ. ದೆಹಲಿಯಲ್ಲಿ ಮಾತನಾಡಿದ ಅವರು,  ಭಾರತ ಎಲ್ಲ ಧರ್ಮ, ಭಾಷೆಗಳ ಜೊತೆಗೆ ಅನ್ಯೋನ್ಯವಾಗಿರುವ ದೇಶ. ಇಂತಹ ದೇಶದಲ್ಲಿ ಈ ರೀತಿಯ ಘಟನೆಗಳು ನಡೆಯಬಾರದು. ನಡೆದಾಗ ಇಂತಹ ಸಾವನ್ನು ವೈಭವೀಕರಿಸಿ ರಾಜಕೀಯಕ್ಕೆ ಬಳಸಿಕೊಳ್ಳಬಾರದು ಎಂದು ತಿಳಿಸಿದರು.

ದೇಶದಲ್ಲಿ ಇದೇ ಮಾದರಿಯಲ್ಲಿ ಹಲವು ಹತ್ಯೆಗಳಾಗಿವೆ. ಹಿಂದೆ ಇದೇ ರಾಜಸ್ಥಾನದಲ್ಲಿ ಶಂಕರಲಾಲ್ ಎನ್ನುವವರು ಓರ್ವ ಯುವಕನ ಹತ್ಯೆ ಮಾಡಿಸಿದ್ದರು. ಫರಿದಾಬಾದ್‍ನಲ್ಲಿ ಅಲ್ಪಸಂಖ್ಯಾತ ಎನ್ನುವ ಕಾರಣಕ್ಕೆ ಯುವಕನ ಹತ್ಯೆ ಮಾಡಲಾಗಿತ್ತು. ಕಟುವಾದಲ್ಲಿ ಐದು ವರ್ಷದ ಹೆಣ್ಣು ಮಗುವನ್ನು ಅತ್ಯಾಚಾರ ಮಾಡಿ ಕೊಲೆ ಮಾಡಲಾಗಿತ್ತು. ಈ ಎಲ್ಲ ಬೆಳವಣಿಗೆಗಳನ್ನು ನಾವು ಖಂಡಿಸಬೇಕು ಎಂದು ಆಗ್ರಹಿಸಿದರು.

 

Share Post