National

ನದಿಗೆ ಉರುಳಿಬಿದ್ದ ಕಾರು; ಒಂಬತ್ತು ಮಂದಿ ದುರ್ಮರಣ

ಡೆಹ್ರಾಡೂನ್; ಉತ್ತರಾಖಂಡದ ನೈನಿತಾಲ್ ಜಿಲ್ಲೆಯ ರಾಮನಗರ ಪ್ರದೇಶದಲ್ಲಿ ಭೀಕರ ಅಪಘಾತ ಸಂಭವಿಸಿದೆ. ಕಾರೊಂದು ನದಿಗೆ ಉರುಳಿಬಿದ್ದಿದ್ದು ಒಂಬತ್ತು ಮಂದಿ ಸಾವನ್ನಪ್ಪಿದ್ದಾರೆ.  ಕಾರಿನಲ್ಲಿ ಹನ್ನೊಂದು ಮಂದಿ ಇದ್ದರು. ಇದರಲ್ಲಿ ಇಬ್ಬರನ್ನು ರಕ್ಷಣೆ ಮಾಡಲಾಗಿದೆ.

ರಾಮನಗರ ಕೋಟ್‌ದ್ವಾರ ರಸ್ತೆಯಲ್ಲಿರುವ ಕಾರ್ಬೆಟ್ ರಾಷ್ಟ್ರೀಯ ಉದ್ಯಾನವನದ ಧೇಲಾ ವಲಯದಲ್ಲಿ ಈ ದುರಂತ ನಡೆದಿದೆ. ಮೃತರೆಲ್ಲರೂ ಪಂಜಾಬ್ ಮೂಲದವರು ಎಂದು ತಿಳಿದುಬಂದಿದೆ. ಘಟನೆ ನಡೆದ ತಕ್ಷಣ ಪೊಲೀಸರು, ರಾಜ್ಯ ವಿಪತ್ತು ನಿರ್ವಹಣಾ ಪಡೆ(ಎಸ್‌ಡಿಆರ್‌ಎಫ್), ಅಗ್ನಿಶಾಮಕ ದಳ ಸ್ಥಳಕ್ಕೆ ಧಾವಿಸಿದೆ. ಪ್ರತ್ಯಕ್ಷದರ್ಶಿಯೊಬ್ಬರ ಪ್ರಕಾರ ಮುಂಜಾನೆ 5 ಗಂಟೆಯ ಹೊತ್ತಿಗೆ ಕಾರು ಕಾರ್ಬೆಟ್ ಕಡೆ ಹೋಗುತ್ತಿತ್ತು. ನದಿಯ ನೀರು ರಸ್ತೆಯಲ್ಲಿ ಹರಿಯುತ್ತಿದ್ದ ಕಾರಣ ಕಾರು ಪ್ರವಾಹದೊಂದಿಗೆ ಕೊಚ್ಚಿಕೊಂಡು ಹೋಗಿದೆ ಎಂದು ತಿಳಿಸಿದ್ದಾರೆ.

 

Share Post