CrimeDistricts

545 ಪಿಎಸ್‌ಐ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ; ಹೇರೂರು ಗಣಪತಿ ಭಟ್‌ ಅರೆಸ್ಟ್‌

ಉತ್ತರ ಕನ್ನಡ; 545 ಪಿಎಸ್‌ಐ ನೇಮಕಾತಿ ಪರೀಕ್ಷೆಯಲ್ಲಿ ನಡೆದ ಅಕ್ರಮ ಪ್ರಕರಣ ಸಂಬಂಧ ಮತ್ತೊಬ್ಬ ಆರೋಪಿಯನ್ನು ಸಿಐಡಿ ಅಧಿಕಾರಿಗಳು ಬಂಧಿಸಿದ್ದಾರೆ. ಉತ್ತರ ಕನ್ನಡ ಜಿಲ್ಲೆ ಸಿದ್ದಾಪುರ ತಾಲ್ಲೂಕಿನ ಹೇರೂರು ಗ್ರಾಮದ ಗಣಪತಿ ಬಟ್‌ ಬಂಧಿತ ಆರೋಪಿ. ಕಳೆದ ರಾತ್ರಿಯೇ ಆರೋಪಿಯನ್ನು ಬಂಧಿಸಲಾಗಿದ್ದು, ಬೆಂಗಳೂರಿಗೆ ಕರೆತರಲಾಗಿದೆ.

ಆರೋಪಿ ಗಣಪತಿ ಭಟ್‌ಗೆ ಹಲವು ಶಾಸಕರ ಸಂಪರ್ಕ ಹೊಂದಿದ್ದು, ಪೊಲೀಸ್‌ ಅಧಿಕಾರಿಗಳ ವರ್ಗಾವಣೆ, ನೇಮಕ ಸೇರಿದಂತೆ ಹಲವು ರೀತಿಯಲ್ಲಿ ಡೀಲಿಂಗ್‌ ನಡೆಸುತ್ತಿದ್ದರು ಎಂಬ ಆರೋಪವಿದೆ. ಇದರ ಮಾಹಿತಿ ಅರಿತ ಸಿಐಡಿ ಅಧಿಕಾರಿಗಳು ನಿನ್ನೆ ರಾತ್ರಿ ದಾಳಿ ನಡೆಸಿ, ಬಂಧಿಸಿದ್ದಾರೆ. ಬೆಂಗಳೂರಿನ ಸಿಐಡಿ ಕಚೇರಿಯಲ್ಲಿ ಆರೋಪಿಯ ವಿಚಾರಣೆ ನಡೆಸಲಾಗುತ್ತಿದೆ.

Share Post