International

ಮಾಲ್ಡೀವ್ಸ್‌ಗೆ ಶ್ರೀಲಂಕಾ ಅಧ್ಯಕ್ಷ ಎಸ್ಕೇಪ್; ಶ್ರೀಲಂಕಾದಲ್ಲಿ ತುರ್ತು ಪರಿಸ್ಥಿತಿ ಘೋಷಣೆ

ಕೊಲಂಬೋ; ಶ್ರೀಲಂಕಾ ಅಧ್ಯಕ್ಷ ಗೊಟಬಯ ರಾಜಪಕ್ಸ ಇಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡೋದಾಗಿ ಘೋಷಣೆ ಮಾಡಿದ್ದರು. ಆದ್ರೆ ಅವರು ರಾಜೀನಾಮೆ ನೀಡದೇ ಮಾಲ್ಡೀವ್ಸ್‌ಗೆ ಪರಾರಿಯಾಗಿದ್ದಾರೆ. ಈ ಬೆನ್ನಲ್ಲೇ ಶ್ರೀಲಂಕಾ ನಾಗರಿಕರು ಬೀದಿಗಿಳಿದಿದ್ದಾರೆ. ಪ್ರಧಾನಿ ಕಚೇರಿ ಬಳಿಯೂ ಪ್ರತಿಭಟನೆ ನಡೆಸುತ್ತಿದ್ದಾರೆ. ಇದರಿಂದಾಗಿ ಶ್ರೀಲಂಕಾ ಸರ್ಕಾರ ಕೈಚೆಲ್ಲಿ ಕುಳಿತಿತ್ತು. ಇದೀಗ ಅದು ಜನರ ಮೇಲೆ ಅಸ್ತ್ರವೊಂದನ್ನು ಪ್ರಯೋಗಿಸಿದೆ.

ಇಂದಿನಿಂದ ಶ್ರೀಲಂಕಾದಲ್ಲಿ ತುರ್ತು ಪರಿಸ್ಥಿತಿ ಘೋಷಣೆ ಮಾಡಲಾಗಿದೆ. ಶ್ರೀಲಂಕಾದ ಪ್ರಧಾನಿ ಕಚೇರಿಯಿಂದ ಅಧಿಕೃತವಾಗಿ ಈ ಆದೇಶ ಹೊರಬಿದ್ದಿದೆ.

 

Share Post