Districts

ಕಾಂಗ್ರೆಸ್‌ದು ನಿದ್ರೆ ಮಾಡುವ ಸಿಂಹವನ್ನು ನಂಬುವ ಸಂಸ್ಕೃತಿ; ಸಿಎಂ ಬೊಮ್ಮಾಯಿ

ಉಡುಪಿ; ಕಾಂಗ್ರೆಸ್‌ ಹಾಗೂ ವಿರೋಧ ಪಕ್ಷಗಳಿಗೆ ನಿದ್ರೆ ಮಾಡುತ್ತಿರುವ ಸಿಂಹವನ್ನು ನಂಬುವ ಸಂಸ್ಕೃತಿ ಇದೆ. ಆದರೆ, ಬಿಜೆಪಿ ಸಶಕ್ತ ಹಾಗೂ ಘರ್ಜನಾ ರೂಪದಲ್ಲಿರುವ ಸಿಂಹವನ್ನು ನಂಬಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವ್ಯಂಗ್ಯವಾಡಿದ್ದಾರೆ. ಉಡುಪಿಯಲ್ಲಿ ಮಾತನಾಡಿದ ಅವರು, ರಾಷ್ಟ್ರ ಲಾಂಛನವನ್ನು ವಿರೋಧ ಪಕ್ಷಗಳು ಹಾಗೂ ಬಿಜೆಪಿ ನೋಡುವ ದೃಷ್ಟಿಕೋನಗಳು ಬೇರೆ ಇದೆ. ಸಾರಾನಾಥದಲ್ಲಿರುವ ಅಶೋಕ ಸ್ಥಂಭದ ಮೇಲಿರುವ ಸಿಂಹದ ಮಾದರಿಯಂತೆಯೇ ರಾಷ್ಟ್ರಲಾಂಛನವನ್ನು ನಿರ್ಮಿಸಲಾಗಿದೆ ಎಂದು ಅವರು ಸ್ಪಷ್ಟಪಡಿಸಿದರು.

 

ವಿರೋಧ ಪಕ್ಷಗಳು ರಾಷ್ಟ್ರ ಲಾಂಛನ ವಿಚಾರದಲ್ಲೂ ರಾಜಕೀಯ ಮಾಡುತ್ತಿವೆ. ಲಾಂಛನದಲ್ಲಿನ ಸಿಂಹ ಉಗ್ರವಾಗಿದೆ, ವ್ಯಘ್ರವಾಗಿದೆ ಎಂದು ಹೇಳಿಕೆ ನೀಡುತ್ತಿದ್ದಾರೆ. ಇದು ಮೊಸರಲ್ಲಿ ಕಲ್ಲು ಹುಡುಕುವ ಪ್ರಯತ್ನ ಎಂದು ಸಿಎಂ ಬೊಮ್ಮಾಯಿ ಇದೇ ವೇಳೆ ಟೀಕಿಸಿದ್ದಾರೆ.

Share Post