BengaluruDistricts

ಮೈಸೂರು ವಿಮಾನ ನಿಲ್ದಾಣಕ್ಕೆ ನಾಲ್ವಡಿ ಕೃಷ್ಣರಾಜ ಒಡೆಯರ್‌ ಹೆಸರು

ಬೆಂಗಳೂರು; ಮೈಸೂರು ವಿಮಾನ ನಿಲ್ದಾಣಕ್ಕೆ ನಾಲ್ವಡಿ ಕೃಷ್ಣರಾಜ ಒಡೆಯರ್‌ ಹೆಸರಿಡಲು ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಮಾಡಲಾಗಿದೆ. ಇಂದು ನಡೆದ ಸಚಿವ ಸಂಪುಟ ಸಭೆಯ ನಂತರ ಸಚಿವ ಮಾಧುಸ್ವಾಮಿ ಈ ಬಗ್ಗೆ ಮಾಹಿತಿ ನೀಡಿದ್ದಾರೆ.

ಮೈಸೂರಿಗೆ ನಾಲ್ವಡಿ ಕೃಷ್ಣರಾಜ ಒಡಸೆಯರ್‌ ನೀಡಿದ ಕೊಡುಗೆ ಹಿನ್ನೆಲೆಯಲ್ಲಿ ಮೈಸೂರು ವಿಮಾನ ನಿಲ್ದಾಣಕ್ಕೆ ಅವರ ಹೆಸರಿಡಲು ನಿರ್ಧಾರ ಮಾಡಲಾಗಿದೆ. ಜೊತೆಗೆ ಮೈಸೂರು ವಿಮಾನ ನಿಲ್ದಾಣದಕ್ಕೆ 240 ಎಕರೆ ಭೂಮಿಯನ್ನು ಹಸ್ತಾಂತರ ಮಾಡಲು ಸಭೆಯಲ್ಲಿ ತೀರ್ಮಾನಿಸಲಾಯಿತು ಎಂದು ಸಚಿವರು ಹೇಳಿದ್ದಾರೆ. ಇನ್ನು ಕಸ್ತೂರಿ ರಂಗನ್‌ ವರದಿ ತಿರಸ್ಕಾರ ಮಾಡಲು ಸಂಪುಟ ತೀರ್ಮಾನ ಮಾಡಲಾಗಿದ್ದು, ಜನವಸತಿ ಪ್ರದೇಶವನ್ನು ಖಾಲಿ ಮಾಡಿಸಲ ಸಾಧ್ಯವಾಗಿಸಲು ಸಾಧ್ಯವಾಗದಿದ್ದಕ್ಕೆ ಈ ವರದಿ ತಿರಸ್ಕರಿಸಲಾಗುತ್ತಿದೆ ಎಂದು ಕೇಂದ್ರ ಸರ್ಕಾರಕ್ಕೆ ವರದಿ ನೀಡಲು ತೀರ್ಮಾನಿಸಲಾಗಿದೆ.ಏರೋಸ್ಪೇಸ್‌, ಡಿಫೆನ್ಸ್‌ ನೀತಿಗೆ ಅನುಮೋದನೆ, ರಸಗೊಬ್ಬರ ದಾಸ್ತಾನು ಮಾಡುವ ಯೋಜನೆಗೆ ಆರ್ಥಿಕ ನೆರವು ಸೇರಿದಂತೆ ಹಲವು ಯೋಜನೆಗಳಿಗೆ ಇಂದಿನ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ.

Share Post