CrimeNational

ಶಿಕ್ಷಕರ ನೇಮಕಾತಿ ಹಗರಣ; ಪಶ್ಚಿಮಬಂಗಾಳ ಸಚಿವ ಪಾರ್ಥ ಅರೆಸ್ಟ್

ಕೋಲ್ಕತ್ತಾ; ಪಶ್ಚಿಮ ಬಂಗಾಳದಲ್ಲಿ ಶಿಕ್ಷಕರ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ಸಚಿವ ಪಾರ್ಥ ಚಟರ್ಜಿ ಅವರನ್ನು ಜಾರಿ ನಿರ್ದೇಶನಾಲಯ ಅಧಿಕಾರಿಗಳು ಬಂಧಿಸಿದ್ದಾರೆ.

ಗ್ರೂಪ್ ಸಿ ಮತ್ತು ಡಿ ಸಿಬ್ಬಂದಿ, 9 ರಿಂದ 12ನೇ ತರಗತಿಗಳ ಸಹಾಯಕ ಶಿಕ್ಷಕರು ಹಾಗೂ ಪ್ರಾಥಮಿಕ ಶಿಕ್ಷಕರ ನೇಮಕಾತಿಯಲ್ಲಿ ಹಗರಣ ನಡೆದಿತ್ತು. ಈ ಬಗ್ಗೆ ತನಿಖೆ ನಡೆಸುವಂತೆ ಕೋಲ್ಕತ್ತಾ ಹೈಕೋರ್ಟ್ ಸಿಬಿಐಗೆ ನಿರ್ದೇಶನ ನೀಡಿತ್ತು. ಈ ನಿರ್ದೇಶನದ ಮೇರೆಗೆ ನಿನ್ನೆ ಚಟರ್ಜಿ ಮನೆ ಮೇಲೆ ದಾಳಿ ನಡೆಸಿದ್ದ ಇ.ಡಿ ಇಂದು ಅವರನ್ನು ಬಂಧನಕ್ಕೊಳಪಡಿಸಿದೆ.

ನಿನ್ನೆಯಷ್ಟೇ ಪಶ್ಚಿಮ ಬಂಗಾಳದಲ್ಲಿ ಶಿಕ್ಷಕರ ನೇಮಕಾತಿ ಹಗರಣಕ್ಕೆ ಸಂಬಂಧಿಸಿದಂತೆ ಸಚಿವ ಪಾರ್ಥ ಚಟರ್ಜಿ ಅವರ ಆಪ್ತೆಯೊಬ್ಬರ ಮನೆ ಮೇಲೆ ದಾಳಿ ನಡೆಸಿ, 20 ಕೋಟಿ ರೂ. ಹಣವನ್ನು ಜಾರಿ ನಿರ್ದೇಶನಾಲಯ ವಶಪಡಿಸಿಕೊಂಡಿತ್ತು.

Share Post