National

ಸದನದಲ್ಲಿ ಕಾಂಗ್ರೆಸ್‌ ಪ್ರತಿಭಟನೆ; ನಾಲ್ವರು ಸಂಸದರ ಅಮಾನತು

ನವದೆಹಲಿ; ಅಗತ್ಯ ವಸ್ತುಗಳ ಬೆಲೆ ಏರಿಕೆ ಸೇರಿದಂತೆ ಹಲವು ವಿಚಾರಗಳನ್ನು ಮುಂದಿಟ್ಟುಕೊಂಡು ಲೋಕಸಭೆಯಲ್ಲಿ ಪ್ರತಿಭಟನೆ ನಡೆಸಿದ ನಾಲ್ವರು ಕಾಂಗ್ರೆಸ್‌ ಸಂಸದರನ್ನು ಮಳೆಗಾಲದ ಅಧಿವೇಶನ ಮುಗಿಯುವವರೆಗೂ ಅಮಾನತು ಮಾಡಲಾಗಿದೆ. ಈ ಬಗ್ಗೆ ಲೋಕಸಭಾ ಸ್ಪೀಕರ್‌ ಓಂ ಬಿರ್ಲಾ ಆದೇಶ ಹೊರಡಿಸಿದ್ದಾರೆ. 

ಕಾಂಗ್ರೆಸ್​ ಸಂಸದರಾದ ಮಾಣಿಕಂ ಟ್ಯಾಗೋರ್​, ಜ್ಯೋತಿಮಣಿ, ರಮ್ಯಾ ಹರಿದಾಸ್ ಮತ್ತು ಟಿ ಎನ್​ ಪ್ರತಾಪನ್​ ಲೋಕಸಭೆಯ ಮಳೆಗಾಲ ಅಧಿವೇಶನದಿಂದ ಅಮಾನತುಗೊಂಡವರು.  ಕಲಾಪ ನಡೆಯುತ್ತಿದ್ದ ಸಂದರ್ಭದಲ್ಲಿ ಇವರು ಕೈಯಲ್ಲಿ ಭಿತ್ತಿಪತ್ರ ಹಾಗೂ ಫಲಕ ಹಿಡಿದುಕೊಂಡು ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿದ್ದರು. ಸ್ಪೀಕರ್‌ ಎಚ್ಚರಿಗೆ ಕೊಟ್ಟರೂ, ಪ್ರತಿಭಟನೆ ನಿಲ್ಲಿಸಲಿಲ್ಲ. ಹೀಗಾಗಿ ನಾಲ್ವರನ್ನೂ ಅಮಾನತು ಮಾಡಲಾಗಿದೆ.

Share Post