CrimeDistricts

ಪ್ರವೀಣ್‌ ನೆಟ್ಟಾರು ಹತ್ಯೆ ಪ್ರಕರಣ; ನೆಟ್ಟಾರಿನತ್ತ ಸಚಿವ ಸುನಿಲ್‌ ಕುಮಾರ್‌

ದಕ್ಷಿಣ ಕನ್ನಡ; ಬಿಜೆಪಿ ಯುವ ಮುಖಂಡ ಪ್ರವೀಣ್‌ ನೆಟ್ಟಾರು ಕೊಲೆ ಹಿನ್ನೆಲೆಯಲ್ಲಿ ಸಚಿವ ಸುನಿಲ್‌ ಕುಮಾರ್‌ ಅವರು ತಮ್ಮ ಎಲ್ಲಾ ಕಾರ್ಯಕ್ರಮಗಳನ್ನೂ ಮೊಟಕುಗೊಳಿಸಿದ್ದಾರೆ. ಸಿಎಂ ಸೂಚನೆ ಹಿನ್ನೆಲೆಯಲ್ಲಿ ಅವರು ವಿಶೇಷ ವಿಮಾನದಲ್ಲಿ ಬೆಂಗಳೂರಿನಿಂದ ಹೊರಟಿದ್ದು, ಮಂಗಳೂರಿಗೆ ಬರಲಿದ್ದಾರೆ. ಅನಂತರ ರಸ್ತೆ ಮಾರ್ಗದ ಮೂಲಕ ಕೊಲೆಯಾದ ಪ್ರವೀಣ್‌ ನೆಟ್ಟಾರು ಅವರ ಸ್ವಗ್ರಾಮ ನೆಟ್ಟಾರಿಗೆ ಬರಲಿದ್ದಾರೆ.

ಸಚಿವ ಸುನಿಲ್‌ ಕುಮಾರ್‌ ಅವರು ಮೊದಲಿಗೆ ಪ್ರವೀಣ್‌ ನೆಟ್ಟಾರು ಅವರ ಕುಟುಂಬದವರನ್ನು ಭೇಟಿಯಾಗಲಿದ್ದಾರೆ. ಅನಂತರ ಅವರು ಅಧಿಕಾರಿಗಳ ಜೊತೆ ಸಭೆ ನಡೆಸಿ, ಘಟನೆ ಬಗ್ಗೆ ಮಾಹಿತಿ ಪಡೆಯಲಿದ್ದಾರೆ. ವಿಮಾನ ಹತ್ತುವುದಕ್ಕೂ ಮೊದಲು ಸಚಿವ ಸುನಿಲ್‌ ಕುಮಾರ್‌ ಅವರು ಟ್ವೀಟ್‌ ಮಾಡಿದ್ದು, ಘಟನೆಯಿಂದ ನಾನು ಆಘಾತಗೊಂಡಿದ್ದೇನೆ. ಮತಾಂಧರ ಕ್ರೌರ್ಯಕ್ಕೆ ಪ್ರವೀಣ್‌ ಬಲಿಯಾಗಿದ್ದಾರೆ. ಇಂತಹ ಕೃತ್ಯಗಳನ್ನು ಸಹಿಸಲು ಸಾಧ್ಯವಿಲ್ಲ. ಸರ್ಕಾರ ಮತ್ತು ಸಮಾಜ ಪ್ರವೀಣ್‌ ಅವರ ಕುಟುಂಬದ ಜೊತೆ ಇರುತ್ತದೆ ಎಂದು ಹೇಳಿದ್ದಾರೆ.

 

Share Post