DistrictsHealth

ಪ್ರವೀಣ್‌ ಕೊಲೆ ಪ್ರಕರಣ; ತಂದೆ ಶೇಖರ್‌ ಪೂಜಾರಿ ಅಸ್ವಸ್ಥ

ಮಂಗಳೂರು; ನಿನ್ನೆ ಹತ್ಯೇಗೀಡಾಗಿದ್ದ ಪ್ರವೀಣ್ ನೆಟ್ಟಾರು ಅವರ ತಂದೆ ಶೇಖರ ಪೂಜಾರಿ ಅವರು ಅಸ್ವಸ್ಥಗೊಂಡಿದ್ದಾರೆ. ಹೃದ್ರೋಗದಿಂದ ಬಳಲುತ್ತಿದ್ದ ಅವರು, ಮಗನ ಸಾವಿನಿಂದ ಜರ್ಜಿತರಾಗಿದ್ದರು. ಈ ಕಾರಣದಿಂದ ಅಸ್ವಸ್ಥರಾಗಿದ್ದು, ಅವರನ್ನು ಬೆಳ್ಳಾರೆಯ ಭಾರಧ್ವಾಜ ಆಸ್ಪತ್ರೆಗೆ ದಾಖಲಿಸಲಾಗಿದೆ.

ಶೇಖರ ಪೂಜಾರಿ ಅವರು ಹೃದ್ರೋಗದಿಂದ ಬಳಲುತ್ತಿದ್ದಾರೆ. ಕುಟುಂಬಕ್ಕೆ ಆಧಾರಸ್ತಂಭದಂತಿದ್ದ ಒಬ್ಬನೇ ಮಗನನ್ನು ಕಳೆದುಕೊಂಡ ಬಳಿಕ ಅವರ ಆರೋಗ್ಯ ಮತ್ತಷ್ಟು ಹದಗೆಟ್ಟಿದೆ. ಇಸಿಜಿ ಮಾಡಿಸುವ ಸಲುವಾಗಿ ಶೇಖರ ಪೂಜಾರಿ ಅವರನ್ನು ಬೆಳ್ಳಾರೆಯ ಭಾರದ್ವಾಜ ಆಸ್ಪತ್ರೆಗೆ ಆಂಬುಲೆನ್ಸ್ ನಲ್ಲಿ ಕರೆದೊಯ್ಯಲಾಯಿತು ಪುತ್ತೂರು ಕ್ಷೇತ್ರದ ಶಾಸಕ ಸಂಜೀವ ಮಠಂದೂರು ಅವರು ನೆಟ್ಟಾರು ಗ್ರಾಮದಲ್ಲಿರುವ ಪ್ರವೀಣ್ ಅವರ ಮನೆಗೆ ಗುರುವಾರ ಭೇಟಿ ನೀಡಿದರು. ಅವರ ಜೊತೆ ನೋವು ತೋಡಿಕೊಳ್ಳುವಾಗ ಶೇಖರ ಅವರು ಮತ್ತಷ್ಟು ಆಘಾತಕ್ಕೊಳಗಾಗಿ ಕುಸಿದು ಬಿದ್ದರು ಎಂದು ತಿಳಿದುಬಂದಿದೆ.

Share Post