BengaluruCrime

ಪ್ಲಾಸ್ಟಿಕ್ ತಯಾರಿಕಾ ಘಟಕದ ಮೇಲೆ ದಾಳಿ; 4,160 ಕೆಜಿ ಪ್ಲಾಸ್ಟಿಕ್ ಜಪ್ತಿ

ಬೆಂಗಳೂರು; ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ದಾಸರಹಳ್ಳಿ ವಲಯ ವ್ಯಾಪ್ತಿಯ ಶೆಟ್ಟಿಹಳ್ಳಿ ವಾರ್ಡ್ ನಲ್ಲಿ ಪ್ಲಾಸ್ಟಿಕ್ ತಯಾರು ಮಾಡುವ ಸುಭದ್ರ ಎಂಟರ್ ಪ್ರೈಸಸ್ ಕಾರ್ಖಾನೆ ಮೇಲೆ ದಾಳಿ ನಡೆಸಿ ಸುಮಾರು 4,160 ಕೆ.ಜಿ ನಿಷೇಧಿತ ಪ್ಲಾಸ್ಟಿಕ್ ಉತ್ಪನ್ನಗಳನ್ನು ವಶಪಡಿಸಿಕೊಳ್ಳಲಾಗಿದೆ. ತಂಡದಲ್ಲಿ ದಾಸರಹಳ್ಳಿ ವಲಯದ ವಲಯ ಜಂಟಿ ಆಯುಕ್ತರ ಸಮ್ಮುಖದಲ್ಲಿ ಈ ದಾಳಿ ನಡೆದಿದೆ.

ವಶಪಡಿಸಿಕೊಂಡ ನಿಷೇಧಿತ ಪ್ಲಾಸ್ಟಿಕ್ ಅನ್ನು  ಚೂರು ಚೂರು ಮಾಡಿ ದೊಡ್ಡಬಿದರಕಲ್ಲು ಘನತ್ಯಾಜ್ಯ ಸಂಸ್ಕರಣಾ ಘಟಕಕ್ಕೆ 7 ಆಟೋ ಟಿಪ್ಪರ್ ಗಳಲ್ಲಿ ವಿಲೇವಾರಿ ಮಾಡಲು ವಲಯ ಜಂಟಿ ಆಯುಕ್ತರು ಸೂಚನೆ ನೀಡಿದರು.

ಬಿಬಿಎಂಪಿ ವ್ಯಾಪ್ತಿಯಲ್ಲಿ ಒಮ್ಮೆ ಬಳಸುವ ಪ್ಲಾಸ್ಟಿಕ್ ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದ್ದು, ನಗರದಾದ್ಯಂತ ಒಮ್ಮೆ ಬಳಸುವ ಪ್ಲಾಸ್ಟಿಕ್ ಬಳಕೆ ಮಾಡುತ್ತಿರುವ ಮಾರಾಟ ಮಳಿಗೆಗಳು, ಉತ್ಪಾದಿಸುತ್ತಿರುವ ಘಟಕಗಳ ಮೇಲೆ ಅನಿರೀಕ್ಷಿತ ತಪಾಸಣೆ ನಡೆಸಿ ಪ್ಲಾಸ್ಟಿಕ್ ವಶಪಡಿಸಿಕೊಳ್ಳುವ ಜೊತೆಗೆ ದಂಡ ವಿಧಿಸಲಾಗುತ್ತಿದೆ.

 

Share Post